Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...