Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...