Homeಮುಖಪುಟ'ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…'; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿದ್ದು, ಇಂದು ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು, ‘ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಅವರಿಂದ ಮಹಿಳಾ ಅಥ್ಲೀಟ್‌ಗಳಿಗೆ ಅನ್ಯಾಯವಾಗಿದೆ ಎಂಬ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವ ಪುನಿಯಾ, ‘ಪ್ರೀತಿಯ ಪ್ರಧಾನಿಯವರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ. ನೀವು ಅನೇಕ ಕೆಲಸಗಳಲ್ಲಿ ನಿರತರಾಗಿದ್ದೀರಿ. ಆದರೆ, ದೇಶದ ಕುಸ್ತಿಪಟುಗಳತ್ತ ನಿಮ್ಮ ಗಮನವನ್ನು ಸೆಳೆಯಲು ನಾನು ಈ ಪತ್ರ ಬರೆಯುತ್ತಿದ್ದೇನೆ. ದೇಶದ ಮಹಿಳಾ ಕುಸ್ತಿಪಟುಗಳು ಜನವರಿಯಲ್ಲಿ ಆರಂಭಿಸಿದ್ದ ಪ್ರತಿಭಟನೆ ಕುರಿತು ನೀವು ತಿಳಿದಿರಬೇಕು. ಇದೇ ವರ್ಷ ಬ್ರಿಶ್ ಭೂಷಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಾನು ಕೂಡ ಅವರ ಪ್ರತಿಭಟನೆಗೆ ಸೇರಿಕೊಂಡಿದ್ದೆ. ಸರ್ಕಾರವು ಕಠಿಣ ಕ್ರಮದ ಭರವಸೆ ನೀಡಿದ ನಂತರ ನಾವು ನಮ್ಮ ಹೋರಾಟವನ್ನು ವಾಪಸ್ ಪಡೆದೆವು’ ಎಂದು ಹೇಳಿದ್ದಾರೆ.

‘ಪ್ರತಿಭಟನೆ ವಾಪಸ್ ಪಡೆದ ಮೂರು ತಿಂಗಳ ನಂತರವೂ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ನಾವು ಮತ್ತೆ ಏಪ್ರಿಲ್‌ನಲ್ಲಿ ಬೀದಿಗಿಳಿದಿದ್ದರಿಂದ ಪೊಲೀಸರು ಅವರ ವಿರುದ್ಧ ಕೇವಲ ಒಂದೇಒಂದು ಎಫ್ಐಆರ್ ದಾಖಲಿಸಿದ್ದಾರೆ. ಜನವರಿಯಲ್ಲಿ 19 ದೂರುದಾರರಿದ್ದರು, ಆದರೆ, ಏಪ್ರಿಲ್ ವೇಳೆಗೆ ಅವರ ಸಂಖ್ಯೆ 7ಕ್ಕೆ ಇಳಿದಿದೆ. ಇದರರ್ಥ ಬ್ರಿಜ್ ಭೂಷಣ್ ಅವರು 12 ಮಹಿಳಾ ಕುಸ್ತಿಪಟುಗಳ ಮೇಲೆ ತಮ್ಮ ಪ್ರಭಾವವನ್ನು ಬೀರಿದ್ದಾರೆ’ ಎಂದು ಪುನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪ್ರತಿಭಟನೆ 40 ದಿನಗಳ ಕಾಲ ನಡೆಯಿತು. ಆ ದಿನಗಳಲ್ಲಿ ನಮ್ಮ ಮೇಲೆ ಹೆಚ್ಚಿನ ಒತ್ತಡವಿತ್ತು. ನಾವು ಗಂಗಾ ನದಿಯಲ್ಲಿ ನಮ್ಮ ಪದಕಗಳನ್ನು ಮುಳುಗಿಸಲು ಹೋದಾಗ ನಮ್ಮನ್ನು ರೈತ ಮುಖಂಡರು ತಡೆದರು. ಆ ಸಮಯದಲ್ಲಿ ನಿಮ್ಮ ಸಂಪುಟದ ಜವಾಬ್ದಾರಿಯುತ ಮಂತ್ರಿಯೊಬ್ಬರು ಕರೆ ಮಾಡಿ, ನಮಗೆ ನ್ಯಾಯದ ಭರವಸೆ ನೀಡಿದ್ದರು. ಈ ಮಧ್ಯೆ, ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ. ಅವರೂ ಸಹ ನಮಗೆ ನ್ಯಾಯದ ಭರವಸೆ ನೀಡಿದರು. ಆದ್ದರಿಂದ ನಾವು ನಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದೇವೆ’ ಎಂದು ವಿವರಿಸಿದ್ದಾರೆ.

‘ಆದರೆ, ಡಿಸೆಂಬರ್ 21 ರಂದು ನಡೆದ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಫೆಡರೇಶನ್ ಮತ್ತೊಮ್ಮೆ ಬ್ರಿಜ್ ಭೂಷಣ್ ಅಧೀನಕ್ಕೆ ಬಂದಿದೆ. ಅವರು ಎಂದಿನಂತೆ ಫೆಡರೇಶನ್ ಮೇಲೆ ಮೇಲುಗೈ ಸಾಧಿಸುತ್ತಾರೆ ಎಂದು ಹೇಳಿದ್ದಾರೆ. ತೀವ್ರ ಒತ್ತಡಕ್ಕೆ ಒಳಗಾದ ಸಾಕ್ಷಿ ಮಲಿಕ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು’ ಎಂದು ಹೇಳಿದ್ದಾರೆ.

‘ನಾವೆಲ್ಲರೂ ನಿನ್ನೆ ರಾತ್ರಿಯಿಡೀ ಕಣ್ಣೀರಿನಲ್ಲಿ ಕಳೆದಿದ್ದೇವೆ. ನಮಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು ಎಂದು ಅರ್ಥವಾಗಲಿಲ್ಲ. ಸರ್ಕಾರ ನಮಗೆ ಸಾಕಷ್ಟು ನೀಡಿದೆ; 2019 ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಾನು ಅರ್ಜುನ, ಖೇಲ್ ರತ್ನ ಪ್ರಶಸ್ತಿಯನ್ನು ಸಹ ಸ್ವೀಕರಿಸಿದ್ದೇನೆ. ನಾನು ಈ ಪ್ರಶಸ್ತಿಗಳನ್ನು ಪಡೆದಾಗ ನಾನು ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ಮುಖ್ಯವಾಗಿ, ಮಹಿಳಾ ಕುಸ್ತಿಪಟು ತನ್ನ ಭದ್ರತೆ ಕಾರಣಕ್ಕೆ ಕ್ರೀಡೆಯನ್ನು ತೊರೆದಿರುವುದೂ ಒಂದು ಕಾರಣ’ ಎಂದು ಬಜರಂಗ್ ಬರೆದಿದ್ದಾರೆ.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...