Homeಮುಖಪುಟ'ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…'; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿದ್ದು, ಇಂದು ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು, ‘ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಅವರಿಂದ ಮಹಿಳಾ ಅಥ್ಲೀಟ್‌ಗಳಿಗೆ ಅನ್ಯಾಯವಾಗಿದೆ ಎಂಬ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವ ಪುನಿಯಾ, ‘ಪ್ರೀತಿಯ ಪ್ರಧಾನಿಯವರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ. ನೀವು ಅನೇಕ ಕೆಲಸಗಳಲ್ಲಿ ನಿರತರಾಗಿದ್ದೀರಿ. ಆದರೆ, ದೇಶದ ಕುಸ್ತಿಪಟುಗಳತ್ತ ನಿಮ್ಮ ಗಮನವನ್ನು ಸೆಳೆಯಲು ನಾನು ಈ ಪತ್ರ ಬರೆಯುತ್ತಿದ್ದೇನೆ. ದೇಶದ ಮಹಿಳಾ ಕುಸ್ತಿಪಟುಗಳು ಜನವರಿಯಲ್ಲಿ ಆರಂಭಿಸಿದ್ದ ಪ್ರತಿಭಟನೆ ಕುರಿತು ನೀವು ತಿಳಿದಿರಬೇಕು. ಇದೇ ವರ್ಷ ಬ್ರಿಶ್ ಭೂಷಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಾನು ಕೂಡ ಅವರ ಪ್ರತಿಭಟನೆಗೆ ಸೇರಿಕೊಂಡಿದ್ದೆ. ಸರ್ಕಾರವು ಕಠಿಣ ಕ್ರಮದ ಭರವಸೆ ನೀಡಿದ ನಂತರ ನಾವು ನಮ್ಮ ಹೋರಾಟವನ್ನು ವಾಪಸ್ ಪಡೆದೆವು’ ಎಂದು ಹೇಳಿದ್ದಾರೆ.

‘ಪ್ರತಿಭಟನೆ ವಾಪಸ್ ಪಡೆದ ಮೂರು ತಿಂಗಳ ನಂತರವೂ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ನಾವು ಮತ್ತೆ ಏಪ್ರಿಲ್‌ನಲ್ಲಿ ಬೀದಿಗಿಳಿದಿದ್ದರಿಂದ ಪೊಲೀಸರು ಅವರ ವಿರುದ್ಧ ಕೇವಲ ಒಂದೇಒಂದು ಎಫ್ಐಆರ್ ದಾಖಲಿಸಿದ್ದಾರೆ. ಜನವರಿಯಲ್ಲಿ 19 ದೂರುದಾರರಿದ್ದರು, ಆದರೆ, ಏಪ್ರಿಲ್ ವೇಳೆಗೆ ಅವರ ಸಂಖ್ಯೆ 7ಕ್ಕೆ ಇಳಿದಿದೆ. ಇದರರ್ಥ ಬ್ರಿಜ್ ಭೂಷಣ್ ಅವರು 12 ಮಹಿಳಾ ಕುಸ್ತಿಪಟುಗಳ ಮೇಲೆ ತಮ್ಮ ಪ್ರಭಾವವನ್ನು ಬೀರಿದ್ದಾರೆ’ ಎಂದು ಪುನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪ್ರತಿಭಟನೆ 40 ದಿನಗಳ ಕಾಲ ನಡೆಯಿತು. ಆ ದಿನಗಳಲ್ಲಿ ನಮ್ಮ ಮೇಲೆ ಹೆಚ್ಚಿನ ಒತ್ತಡವಿತ್ತು. ನಾವು ಗಂಗಾ ನದಿಯಲ್ಲಿ ನಮ್ಮ ಪದಕಗಳನ್ನು ಮುಳುಗಿಸಲು ಹೋದಾಗ ನಮ್ಮನ್ನು ರೈತ ಮುಖಂಡರು ತಡೆದರು. ಆ ಸಮಯದಲ್ಲಿ ನಿಮ್ಮ ಸಂಪುಟದ ಜವಾಬ್ದಾರಿಯುತ ಮಂತ್ರಿಯೊಬ್ಬರು ಕರೆ ಮಾಡಿ, ನಮಗೆ ನ್ಯಾಯದ ಭರವಸೆ ನೀಡಿದ್ದರು. ಈ ಮಧ್ಯೆ, ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ. ಅವರೂ ಸಹ ನಮಗೆ ನ್ಯಾಯದ ಭರವಸೆ ನೀಡಿದರು. ಆದ್ದರಿಂದ ನಾವು ನಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದೇವೆ’ ಎಂದು ವಿವರಿಸಿದ್ದಾರೆ.

‘ಆದರೆ, ಡಿಸೆಂಬರ್ 21 ರಂದು ನಡೆದ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಫೆಡರೇಶನ್ ಮತ್ತೊಮ್ಮೆ ಬ್ರಿಜ್ ಭೂಷಣ್ ಅಧೀನಕ್ಕೆ ಬಂದಿದೆ. ಅವರು ಎಂದಿನಂತೆ ಫೆಡರೇಶನ್ ಮೇಲೆ ಮೇಲುಗೈ ಸಾಧಿಸುತ್ತಾರೆ ಎಂದು ಹೇಳಿದ್ದಾರೆ. ತೀವ್ರ ಒತ್ತಡಕ್ಕೆ ಒಳಗಾದ ಸಾಕ್ಷಿ ಮಲಿಕ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು’ ಎಂದು ಹೇಳಿದ್ದಾರೆ.

‘ನಾವೆಲ್ಲರೂ ನಿನ್ನೆ ರಾತ್ರಿಯಿಡೀ ಕಣ್ಣೀರಿನಲ್ಲಿ ಕಳೆದಿದ್ದೇವೆ. ನಮಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು ಎಂದು ಅರ್ಥವಾಗಲಿಲ್ಲ. ಸರ್ಕಾರ ನಮಗೆ ಸಾಕಷ್ಟು ನೀಡಿದೆ; 2019 ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಾನು ಅರ್ಜುನ, ಖೇಲ್ ರತ್ನ ಪ್ರಶಸ್ತಿಯನ್ನು ಸಹ ಸ್ವೀಕರಿಸಿದ್ದೇನೆ. ನಾನು ಈ ಪ್ರಶಸ್ತಿಗಳನ್ನು ಪಡೆದಾಗ ನಾನು ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ಮುಖ್ಯವಾಗಿ, ಮಹಿಳಾ ಕುಸ್ತಿಪಟು ತನ್ನ ಭದ್ರತೆ ಕಾರಣಕ್ಕೆ ಕ್ರೀಡೆಯನ್ನು ತೊರೆದಿರುವುದೂ ಒಂದು ಕಾರಣ’ ಎಂದು ಬಜರಂಗ್ ಬರೆದಿದ್ದಾರೆ.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...