Homeಕರ್ನಾಟಕಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ (17) ಅವರನ್ನು ಅಕ್ಟೋಬರ್ 9, 2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ್ದಾರೆ. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ‘ಧೂತ: ಸಮೀರ್ ಎಂಡಿ’ಯಲ್ಲಿ “ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ; ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ವಿಡಿಯೊದ ಥಂಬ್‌ನೈಲ್‌ನಲ್ಲಿ ಅವರು ”ಧರ್ಮಸ್ಥಳ ಹಾರರ್‌” ಎಂಬ ಪೋಸ್ಟರ್ ಹಾಕಿದ್ದರು. ಈ ವಿಡಿಯೊ ಪ್ರಸ್ತುತ 180 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಈ ವೀಡಿಯೊದಲ್ಲಿ ಅವರು ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾತನಾಡಿದ್ದರು. ಅದರಲ್ಲೂ ವಿಶೇಷವಾಗಿ 2012 ರ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ, ಸಂತೋಷ್ ರಾವ್ ಅವರನ್ನು ತಪ್ಪಾಗಿ ಬಂಧಿಸಿದ್ದು, ನಂತರದ ಅವರು ಖುಲಾಸೆಗೊಂಡಿದ್ದನ್ನು ಮತ್ತು ಹಲವು ಕಾಣದ ಕೈಗಳು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಬಗ್ಗೆ ಮಾತನಾಡಿದ್ದರು.

ಅದಾಗ್ಯೂ, ಈ ವಿಡಿಯೊ ರಾಜ್ಯದಾದ್ಯಂತ ವ್ಯಾಪಕ ಸಂಚಲನ ಮೂಡಿಸಿತ್ತು. ಈ ನಡುವೆ ಮಾರ್ಚ್ 5, 2025 ರಂದು, ಕೌಲ್ ಬಜಾರ್ ಪೊಲೀಸರು ಸಮೀರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದ್ದರು. ಸಮೀರ್ ಅವರ ಈ ವೀಡಿಯೊದಲ್ಲಿ ಧರ್ಮಸ್ಥಳ ಮತ್ತು ಅದರ ಧಾರ್ಮಿಕ ನಾಯಕರ ಬಗ್ಗೆ ಜನರಿಗೆ ಇದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಸಮೀರ್ ಪರ ವಾದ ಮಂಡಿಸಿದ ವಕೀಲ ಎ. ವೇಲನ್, ಕಾನೂನು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಜೊತೆಗೆ ಈ ಎಫ್‌ಐಆರ್‌ ಸಮೀರ್‌ ಅವರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 299 ಅಡಿಯಲ್ಲಿ ವ್ಯಾಖ್ಯಾನ ಮಾಡಿದ್ದ ಪೊಲೀಸರ ಕ್ರಮಕ್ಕೆ ಅನುಮತಿ ನೀಡಿದರೆ ಅದು ಅಪಾಯಕಾರಿ ಪೂರ್ವ ನಿದರ್ಶನವಾಗಲಿದೆ ಎಂದು ಎತ್ತಿ ತೋರಿಸಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಸೌಜನ್ಯ ಪ್ರಕರಣವು ವ್ಯಾಪಕವಾಗಿ ಚರ್ಚಿಸಲ್ಪಟ್ಟ ಪ್ರಕರಣವಾಗಿತ್ತು. ನೇತ್ರಾವತಿ ನದಿಯ ಬಳಿ ಸೌಜನ್ಯ ಅವರ ಶವ ಪತ್ತೆಯಾಗಿದ್ದು, ಈ ವೇಳೆ ಅವರ ಕೈಗಳನ್ನು ಶಾಲಿನಿಂದ ಮರಕ್ಕೆ ಕಟ್ಟಲಾಗಿತ್ತು.

ಇದರ ನಂತರ ಪೊಲೀಸರು ಸಂತೋಷ್ ರಾವ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಆದರೆ ಜೂನ್ 16, 2023 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು. ಕಾನೂನು ಪ್ರಕ್ರಿಯೆಗಳ ಉದ್ದಕ್ಕೂ, ಸೌಜನ್ಯ ಅವರ ಕುಟುಂಬವು ಸಂತೋಷ್ ರಾವ್ ಅವರನ್ನು ತಪ್ಪಾಗಿ ಆರೋಪಿಸಲಾಗಿದೆ ಎಂದು ವಾದಿಸಿತ್ತು. ಜೊತೆಗೆ ತನಿಖೆಯಲ್ಲಿನ ನ್ಯೂನತೆಗಳನ್ನು ಆರೋಪಿಸಿ ಧರ್ಮಸ್ಥಳದ ಧಾರ್ಮಿಕ ಮುಖಂಡ ವೀರೇಂದ್ರ ಹೆಗ್ಗಡೆ ನಿಜವಾದ ಅಪರಾಧಿಗಳನ್ನು ರಕ್ಷಿಸಿದ್ದಾರೆ ಎಂದು ಪ್ರತಿಪಾದಿಸಿತ್ತು.

ಸಂತೋಷ್ ರಾವ್ ಅವರು ಖುಲಾಸೆಗೊಂಡ ನಂತರ ಕೂಡಾ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಜೊತೆಗೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಕರೆಗಳು ಬಂದವು. 11 ವರ್ಷಗಳ ತನಿಖೆಯ ನಂತರ, ಬೆಂಗಳೂರಿನ ನ್ಯಾಯಾಲಯವು 2023 ರಲ್ಲಿ ಪ್ರಕರಣದ ಏಕೈಕ ಆರೋಪಿ ಸಂತೋಷ್ ರಾವ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...