Homeಕರ್ನಾಟಕಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ (17) ಅವರನ್ನು ಅಕ್ಟೋಬರ್ 9, 2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ್ದಾರೆ. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ‘ಧೂತ: ಸಮೀರ್ ಎಂಡಿ’ಯಲ್ಲಿ “ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ; ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ವಿಡಿಯೊದ ಥಂಬ್‌ನೈಲ್‌ನಲ್ಲಿ ಅವರು ”ಧರ್ಮಸ್ಥಳ ಹಾರರ್‌” ಎಂಬ ಪೋಸ್ಟರ್ ಹಾಕಿದ್ದರು. ಈ ವಿಡಿಯೊ ಪ್ರಸ್ತುತ 180 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಈ ವೀಡಿಯೊದಲ್ಲಿ ಅವರು ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾತನಾಡಿದ್ದರು. ಅದರಲ್ಲೂ ವಿಶೇಷವಾಗಿ 2012 ರ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ, ಸಂತೋಷ್ ರಾವ್ ಅವರನ್ನು ತಪ್ಪಾಗಿ ಬಂಧಿಸಿದ್ದು, ನಂತರದ ಅವರು ಖುಲಾಸೆಗೊಂಡಿದ್ದನ್ನು ಮತ್ತು ಹಲವು ಕಾಣದ ಕೈಗಳು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಬಗ್ಗೆ ಮಾತನಾಡಿದ್ದರು.

ಅದಾಗ್ಯೂ, ಈ ವಿಡಿಯೊ ರಾಜ್ಯದಾದ್ಯಂತ ವ್ಯಾಪಕ ಸಂಚಲನ ಮೂಡಿಸಿತ್ತು. ಈ ನಡುವೆ ಮಾರ್ಚ್ 5, 2025 ರಂದು, ಕೌಲ್ ಬಜಾರ್ ಪೊಲೀಸರು ಸಮೀರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದ್ದರು. ಸಮೀರ್ ಅವರ ಈ ವೀಡಿಯೊದಲ್ಲಿ ಧರ್ಮಸ್ಥಳ ಮತ್ತು ಅದರ ಧಾರ್ಮಿಕ ನಾಯಕರ ಬಗ್ಗೆ ಜನರಿಗೆ ಇದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಸಮೀರ್ ಪರ ವಾದ ಮಂಡಿಸಿದ ವಕೀಲ ಎ. ವೇಲನ್, ಕಾನೂನು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಜೊತೆಗೆ ಈ ಎಫ್‌ಐಆರ್‌ ಸಮೀರ್‌ ಅವರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 299 ಅಡಿಯಲ್ಲಿ ವ್ಯಾಖ್ಯಾನ ಮಾಡಿದ್ದ ಪೊಲೀಸರ ಕ್ರಮಕ್ಕೆ ಅನುಮತಿ ನೀಡಿದರೆ ಅದು ಅಪಾಯಕಾರಿ ಪೂರ್ವ ನಿದರ್ಶನವಾಗಲಿದೆ ಎಂದು ಎತ್ತಿ ತೋರಿಸಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಸೌಜನ್ಯ ಪ್ರಕರಣವು ವ್ಯಾಪಕವಾಗಿ ಚರ್ಚಿಸಲ್ಪಟ್ಟ ಪ್ರಕರಣವಾಗಿತ್ತು. ನೇತ್ರಾವತಿ ನದಿಯ ಬಳಿ ಸೌಜನ್ಯ ಅವರ ಶವ ಪತ್ತೆಯಾಗಿದ್ದು, ಈ ವೇಳೆ ಅವರ ಕೈಗಳನ್ನು ಶಾಲಿನಿಂದ ಮರಕ್ಕೆ ಕಟ್ಟಲಾಗಿತ್ತು.

ಇದರ ನಂತರ ಪೊಲೀಸರು ಸಂತೋಷ್ ರಾವ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಆದರೆ ಜೂನ್ 16, 2023 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು. ಕಾನೂನು ಪ್ರಕ್ರಿಯೆಗಳ ಉದ್ದಕ್ಕೂ, ಸೌಜನ್ಯ ಅವರ ಕುಟುಂಬವು ಸಂತೋಷ್ ರಾವ್ ಅವರನ್ನು ತಪ್ಪಾಗಿ ಆರೋಪಿಸಲಾಗಿದೆ ಎಂದು ವಾದಿಸಿತ್ತು. ಜೊತೆಗೆ ತನಿಖೆಯಲ್ಲಿನ ನ್ಯೂನತೆಗಳನ್ನು ಆರೋಪಿಸಿ ಧರ್ಮಸ್ಥಳದ ಧಾರ್ಮಿಕ ಮುಖಂಡ ವೀರೇಂದ್ರ ಹೆಗ್ಗಡೆ ನಿಜವಾದ ಅಪರಾಧಿಗಳನ್ನು ರಕ್ಷಿಸಿದ್ದಾರೆ ಎಂದು ಪ್ರತಿಪಾದಿಸಿತ್ತು.

ಸಂತೋಷ್ ರಾವ್ ಅವರು ಖುಲಾಸೆಗೊಂಡ ನಂತರ ಕೂಡಾ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಜೊತೆಗೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಕರೆಗಳು ಬಂದವು. 11 ವರ್ಷಗಳ ತನಿಖೆಯ ನಂತರ, ಬೆಂಗಳೂರಿನ ನ್ಯಾಯಾಲಯವು 2023 ರಲ್ಲಿ ಪ್ರಕರಣದ ಏಕೈಕ ಆರೋಪಿ ಸಂತೋಷ್ ರಾವ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...