Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...