Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...