Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...