Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...