Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...