Homeಮುಖಪುಟಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

ಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಸೌರವ್ ಗಂಗೂಲಿಯವರನ್ನು ಕೆಳಗಿಳಿಸುತ್ತಿರುವುದನ್ನು ವಂಚನೆ ಎಂದು ಕರೆದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರು, ಪ್ರಧಾನಿಗಳೇ ದಯವಿಟ್ಟು ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗಾದರೂ ಕಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಕೋಲ್ಕಾತ್ತ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, “ಸೌರವ್ ಗಂಗೂಲಿಯವರನ್ನು ಹೊರಗಿಡುತ್ತಿರುವುದು ಅವರಿಗೆ ಮಾಡುತ್ತಿರುವ ವಂಚನೆಯಾಗಿದೆ. ಅವರು ಮಾಡಿದ ತಪ್ಪಾದರೂ ಏನು? ಇದರಿಂದ ನನಗೆ ಬಹಳ ದುಃಖವಾಗಿದೆ. ಸೌರವ್ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ದೇಶಕ್ಕಾಗಿ ಬಹಳ ಕೊಡುಗೆ ನೀಡಿದ್ದಾರೆ. ಅವರು ಕೇವಲ ಬಂಗಾಳದ ಹೆಮ್ಮೆ ಮಾತ್ರವಲ್ಲ ಇಡೀ ಭಾರತದ ಹೆಮ್ಮೆಯಾಗಿದ್ದಾರೆ. ಅವರನ್ನು ಅನ್ಯಾಯ ಮಾರ್ಗದಲ್ಲಿ ಹೊರಗಿಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

“ಸೌರವ್ ಗಂಗೂಲಿ ಮತ್ತು ಜಯ್ ಶಾ ಎರಡನೇ ಅವಧಿಗೆ ಮುಂದುವರೆಯಬಹುದು ಎಂದು ಕೋರ್ಟ್ ಹೇಳಿದೆ. ಆದರೆ ಅಮಿತ್ ಶಾ ಮಗ ಮಾತ್ರ ಕಾರ್ಯದರ್ಶಿಯಾಗಿ ಮುಂದುವರೆಯುತ್ತಿದ್ದು, ಸೌರವ್ ಗಂಗೂಲಿಯವರನ್ನು ಏಕೆ ಹೊರಹಾಕಲಾಗುತ್ತಿದೆ ನನಗೆ ಗೊತ್ತಿಲ್ಲ. ನನಗೆ ಜಯ್ ಶಾ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಅನ್ಯಾಯಯುತವಾಗಿ ಸೌರವ್‌ರವರನ್ನು ಹೊರಹಾಕುತ್ತಿರುವಾಗ ಐಸಿಸಿಯಲ್ಲಿ ಅವರಿಗೆ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಪ್ರತೀಕಾರವಾಗಿ ಅಥವಾ ರಾಜಕೀಯವಾಗಿ ತೆಗೆದುಕೊಳ್ಳಬೇಡಿ ಎಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ. ಕ್ರಿಕೆಟ್‌ಗಾಗಿ, ಕ್ರೀಡೆಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕರ್ನಾಟಕದ ರೋಜರ್ ಬಿನ್ನಿಯವರು BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು ಈ ಹಿಂದೆ TMC ಆರೋಪಿಸಿತ್ತು. ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿತ್ತು.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದರು.

ಇನ್ನು ದೊಡ್ಡ ಹುದ್ದೆಗೆ ಹೋಗುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದರು. ಆದರೂ ಅವರು ಬಂಗಾಳ ಕ್ರಿಕೆಟ್ ಅಸೋಷಿಯೇಷನ್ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...