Homeಮುಖಪುಟಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

ಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಸೌರವ್ ಗಂಗೂಲಿಯವರನ್ನು ಕೆಳಗಿಳಿಸುತ್ತಿರುವುದನ್ನು ವಂಚನೆ ಎಂದು ಕರೆದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರು, ಪ್ರಧಾನಿಗಳೇ ದಯವಿಟ್ಟು ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗಾದರೂ ಕಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಕೋಲ್ಕಾತ್ತ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, “ಸೌರವ್ ಗಂಗೂಲಿಯವರನ್ನು ಹೊರಗಿಡುತ್ತಿರುವುದು ಅವರಿಗೆ ಮಾಡುತ್ತಿರುವ ವಂಚನೆಯಾಗಿದೆ. ಅವರು ಮಾಡಿದ ತಪ್ಪಾದರೂ ಏನು? ಇದರಿಂದ ನನಗೆ ಬಹಳ ದುಃಖವಾಗಿದೆ. ಸೌರವ್ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ದೇಶಕ್ಕಾಗಿ ಬಹಳ ಕೊಡುಗೆ ನೀಡಿದ್ದಾರೆ. ಅವರು ಕೇವಲ ಬಂಗಾಳದ ಹೆಮ್ಮೆ ಮಾತ್ರವಲ್ಲ ಇಡೀ ಭಾರತದ ಹೆಮ್ಮೆಯಾಗಿದ್ದಾರೆ. ಅವರನ್ನು ಅನ್ಯಾಯ ಮಾರ್ಗದಲ್ಲಿ ಹೊರಗಿಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

“ಸೌರವ್ ಗಂಗೂಲಿ ಮತ್ತು ಜಯ್ ಶಾ ಎರಡನೇ ಅವಧಿಗೆ ಮುಂದುವರೆಯಬಹುದು ಎಂದು ಕೋರ್ಟ್ ಹೇಳಿದೆ. ಆದರೆ ಅಮಿತ್ ಶಾ ಮಗ ಮಾತ್ರ ಕಾರ್ಯದರ್ಶಿಯಾಗಿ ಮುಂದುವರೆಯುತ್ತಿದ್ದು, ಸೌರವ್ ಗಂಗೂಲಿಯವರನ್ನು ಏಕೆ ಹೊರಹಾಕಲಾಗುತ್ತಿದೆ ನನಗೆ ಗೊತ್ತಿಲ್ಲ. ನನಗೆ ಜಯ್ ಶಾ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಅನ್ಯಾಯಯುತವಾಗಿ ಸೌರವ್‌ರವರನ್ನು ಹೊರಹಾಕುತ್ತಿರುವಾಗ ಐಸಿಸಿಯಲ್ಲಿ ಅವರಿಗೆ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಪ್ರತೀಕಾರವಾಗಿ ಅಥವಾ ರಾಜಕೀಯವಾಗಿ ತೆಗೆದುಕೊಳ್ಳಬೇಡಿ ಎಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ. ಕ್ರಿಕೆಟ್‌ಗಾಗಿ, ಕ್ರೀಡೆಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕರ್ನಾಟಕದ ರೋಜರ್ ಬಿನ್ನಿಯವರು BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು ಈ ಹಿಂದೆ TMC ಆರೋಪಿಸಿತ್ತು. ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿತ್ತು.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದರು.

ಇನ್ನು ದೊಡ್ಡ ಹುದ್ದೆಗೆ ಹೋಗುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದರು. ಆದರೂ ಅವರು ಬಂಗಾಳ ಕ್ರಿಕೆಟ್ ಅಸೋಷಿಯೇಷನ್ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...