Homeಮುಖಪುಟಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

ಸೌರವ್ ಗಂಗೂಲಿಗೆ ವಂಚಿಸಲಾಗುತ್ತಿದೆ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಸೌರವ್ ಗಂಗೂಲಿಯವರನ್ನು ಕೆಳಗಿಳಿಸುತ್ತಿರುವುದನ್ನು ವಂಚನೆ ಎಂದು ಕರೆದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರು, ಪ್ರಧಾನಿಗಳೇ ದಯವಿಟ್ಟು ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗಾದರೂ ಕಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಕೋಲ್ಕಾತ್ತ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, “ಸೌರವ್ ಗಂಗೂಲಿಯವರನ್ನು ಹೊರಗಿಡುತ್ತಿರುವುದು ಅವರಿಗೆ ಮಾಡುತ್ತಿರುವ ವಂಚನೆಯಾಗಿದೆ. ಅವರು ಮಾಡಿದ ತಪ್ಪಾದರೂ ಏನು? ಇದರಿಂದ ನನಗೆ ಬಹಳ ದುಃಖವಾಗಿದೆ. ಸೌರವ್ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ದೇಶಕ್ಕಾಗಿ ಬಹಳ ಕೊಡುಗೆ ನೀಡಿದ್ದಾರೆ. ಅವರು ಕೇವಲ ಬಂಗಾಳದ ಹೆಮ್ಮೆ ಮಾತ್ರವಲ್ಲ ಇಡೀ ಭಾರತದ ಹೆಮ್ಮೆಯಾಗಿದ್ದಾರೆ. ಅವರನ್ನು ಅನ್ಯಾಯ ಮಾರ್ಗದಲ್ಲಿ ಹೊರಗಿಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

“ಸೌರವ್ ಗಂಗೂಲಿ ಮತ್ತು ಜಯ್ ಶಾ ಎರಡನೇ ಅವಧಿಗೆ ಮುಂದುವರೆಯಬಹುದು ಎಂದು ಕೋರ್ಟ್ ಹೇಳಿದೆ. ಆದರೆ ಅಮಿತ್ ಶಾ ಮಗ ಮಾತ್ರ ಕಾರ್ಯದರ್ಶಿಯಾಗಿ ಮುಂದುವರೆಯುತ್ತಿದ್ದು, ಸೌರವ್ ಗಂಗೂಲಿಯವರನ್ನು ಏಕೆ ಹೊರಹಾಕಲಾಗುತ್ತಿದೆ ನನಗೆ ಗೊತ್ತಿಲ್ಲ. ನನಗೆ ಜಯ್ ಶಾ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಅನ್ಯಾಯಯುತವಾಗಿ ಸೌರವ್‌ರವರನ್ನು ಹೊರಹಾಕುತ್ತಿರುವಾಗ ಐಸಿಸಿಯಲ್ಲಿ ಅವರಿಗೆ ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಪ್ರತೀಕಾರವಾಗಿ ಅಥವಾ ರಾಜಕೀಯವಾಗಿ ತೆಗೆದುಕೊಳ್ಳಬೇಡಿ ಎಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ. ಕ್ರಿಕೆಟ್‌ಗಾಗಿ, ಕ್ರೀಡೆಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕರ್ನಾಟಕದ ರೋಜರ್ ಬಿನ್ನಿಯವರು BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು ಈ ಹಿಂದೆ TMC ಆರೋಪಿಸಿತ್ತು. ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿತ್ತು.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದರು.

ಇನ್ನು ದೊಡ್ಡ ಹುದ್ದೆಗೆ ಹೋಗುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದರು. ಆದರೂ ಅವರು ಬಂಗಾಳ ಕ್ರಿಕೆಟ್ ಅಸೋಷಿಯೇಷನ್ ಹುದ್ದೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...