Homeಮುಖಪುಟಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಅಮಿತ್ ಶಾ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ ಎಂದು ಟಿಎಂಸಿ ಪ್ರಶ್ನಿಸಿದೆ.

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿಯವರನ್ನು ಎರಡನೇ ಅವಧಿಗೆ ಮುಂದುವರೆಸುವುದಿಲ್ಲ, ಬದಲಿಗೆ ರೋಜರ್ ಬಿನ್ನಿಯವರು ಆ ಸ್ಥಾನ ಪಡೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೆ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ಮೇಲೆ ಹರಿಹಾಯ್ದಿದೆ. ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು TMC ಆರೋಪಿಸಿದೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿದೆ.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಗಂಗೂಲಿ ಅವರು ಎರಡನೇ ಬಾರಿಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ. ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾವು ಈ ವಿಷಯದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸುವುದಿಲ್ಲ, ಆದರೆ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ ಅದಕ್ಕೆ ಪ್ರತಿಕ್ರಿಯಿಸುವುದು ಖಂಡಿತವಾಗಿಯೂ ಬಿಜೆಪಿಯ ಜವಾಬ್ದಾರಿಯಾಗಿದೆ ಎಂದು ಘೋಷ್ ಹೇಳಿದ್ದಾರೆ.

ಈ ವರ್ಷದ ಮೇ ತಿಂಗಳಿನಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು (ಅಮಿತ್ ಶಾ) ಗಂಗೂಲಿ ಅವರ ಮನೆಗೆ ಊಟಕ್ಕೆ ಹೋಗಿದ್ದರು. ಈ ಕುರಿತು ಚೆನ್ನಾಗಿ ವಿವರಿಸಲು ಸೌರವ್ ಅವರಿಗೆ ಸಾಧ್ಯವಿದೆ ಎಂದು ನನಗನಿಸುತ್ತದೆ. ಅಂದಿನ ರಾಜಕೀಯದ ಕುರಿತು ಅವರು ಎಷ್ಟು ಮಾತನಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಟಿಎಂಸಿ ಹೇಳಿಕೆಗೆ ಆಧಾರವಿಲ್ಲದ ಆರೋಪ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮಾತನಾಡಿ, “ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕ್ರಿಕೆಟ್ ದಂತಕತೆಯಾಗಿದ್ದಾರೆ. ಆದರೆ ಕೆಲವರು ಅವರನ್ನು ಎರಡನೇ ಬಾರಿಗೆ ಮುಂದುವರೆಸುತ್ತಿಲ್ಲ ಎಂದು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಅವರು ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗ ಅವರ ಪಾತ್ರ ಏನಾದರೂ ಇದೆಯೇ? ತೃಣಮೂಲವು ಪ್ರತಿಯೊಂದು ವಿಷಯವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ರೋಜರ್ ಬಿನ್ನಿಯವರು ಮಂಗಳವಾರ BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಜಯ್ ಶಾ ಕೂಡ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದಲ್ಲಿ ಅವರು ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆಗ ಅವರು ಐಸಿಸಿ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿ ಗಂಗೂಲಿಯನ್ನು ಬದಲಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ; ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...