Homeಮುಖಪುಟಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ಅಮಿತ್ ಶಾ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ ಎಂದು ಟಿಎಂಸಿ ಪ್ರಶ್ನಿಸಿದೆ.

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿಯವರನ್ನು ಎರಡನೇ ಅವಧಿಗೆ ಮುಂದುವರೆಸುವುದಿಲ್ಲ, ಬದಲಿಗೆ ರೋಜರ್ ಬಿನ್ನಿಯವರು ಆ ಸ್ಥಾನ ಪಡೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೆ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ಮೇಲೆ ಹರಿಹಾಯ್ದಿದೆ. ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಹಾಕಲಾಗುತ್ತಿದೆ ಎಂದು TMC ಆರೋಪಿಸಿದೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದಾದರೆ ಸೌರವ್ ಗಂಗೂಲಿ ಯಾಕಿಲ್ಲ? ಏಕೆಂದರೆ ಇದು ಬಿಜೆಪಿಯ ಸೇಡಿನ ರಾಜಕೀಯದ ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿದೆ.

ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜನಪ್ರಿಯತೆ ಹೊಂದಿರುವ ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆ ಎಂಬ ಉಹಾಪೋಹ ಹಬ್ಬಿಸಿತ್ತು. ಅದು ಸಾಧ್ಯವಾಗದ ಕಾರಣ ಅವರನ್ನು ಎರಡನೇ ಭಾರಿಗೆ ಮುಂದುವರೆಸಿಲ್ಲ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಗಂಗೂಲಿ ಅವರು ಎರಡನೇ ಬಾರಿಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ. ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾವು ಈ ವಿಷಯದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸುವುದಿಲ್ಲ, ಆದರೆ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ ಅದಕ್ಕೆ ಪ್ರತಿಕ್ರಿಯಿಸುವುದು ಖಂಡಿತವಾಗಿಯೂ ಬಿಜೆಪಿಯ ಜವಾಬ್ದಾರಿಯಾಗಿದೆ ಎಂದು ಘೋಷ್ ಹೇಳಿದ್ದಾರೆ.

ಈ ವರ್ಷದ ಮೇ ತಿಂಗಳಿನಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು (ಅಮಿತ್ ಶಾ) ಗಂಗೂಲಿ ಅವರ ಮನೆಗೆ ಊಟಕ್ಕೆ ಹೋಗಿದ್ದರು. ಈ ಕುರಿತು ಚೆನ್ನಾಗಿ ವಿವರಿಸಲು ಸೌರವ್ ಅವರಿಗೆ ಸಾಧ್ಯವಿದೆ ಎಂದು ನನಗನಿಸುತ್ತದೆ. ಅಂದಿನ ರಾಜಕೀಯದ ಕುರಿತು ಅವರು ಎಷ್ಟು ಮಾತನಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಟಿಎಂಸಿ ಹೇಳಿಕೆಗೆ ಆಧಾರವಿಲ್ಲದ ಆರೋಪ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮಾತನಾಡಿ, “ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಕ್ರಿಕೆಟ್ ದಂತಕತೆಯಾಗಿದ್ದಾರೆ. ಆದರೆ ಕೆಲವರು ಅವರನ್ನು ಎರಡನೇ ಬಾರಿಗೆ ಮುಂದುವರೆಸುತ್ತಿಲ್ಲ ಎಂದು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಅವರು ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗ ಅವರ ಪಾತ್ರ ಏನಾದರೂ ಇದೆಯೇ? ತೃಣಮೂಲವು ಪ್ರತಿಯೊಂದು ವಿಷಯವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ರೋಜರ್ ಬಿನ್ನಿಯವರು ಮಂಗಳವಾರ BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಕ್ಟೋಬರ್ 18 ರಂದು ಮುಂಬೈನಲ್ಲಿ BCCI ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಅಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಜಯ್ ಶಾ ಕೂಡ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದಲ್ಲಿ ಅವರು ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆಗ ಅವರು ಐಸಿಸಿ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿ ಗಂಗೂಲಿಯನ್ನು ಬದಲಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ; ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...