Homeಅಂತರಾಷ್ಟ್ರೀಯದಕ್ಷಿಣ ಆಫ್ರಿಕಾ ಹಿಂಸಾಚಾರ - 70 ಭಾರತೀಯರು ಮೃತ; ಶತಕೋಟಿ ನಷ್ಟ

ದಕ್ಷಿಣ ಆಫ್ರಿಕಾ ಹಿಂಸಾಚಾರ – 70 ಭಾರತೀಯರು ಮೃತ; ಶತಕೋಟಿ ನಷ್ಟ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಹಿಂಸೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಕಳಿಸಿದೆಯಾರೂ, ಹಿಂಸಾಚಾರದಿಂದಾಗಿ ದೇಶಕ್ಕೆ ಶತಕೋಟಿ ರಾಂಡ್ (ಆಫ್ರಿಕಾ ಕರೆನ್ಸಿ) ನಷ್ಟವಾಗಿದೆ ಎಂದು ಅಧ್ಯಕ್ಷ ಸಿರಿಲ್ ರಾಮಾಫೋಸಾ ಶುಕ್ರವಾರ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನದ ನಂತರ ಕಳೆದ ವಾರ ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಹಲವಾರು ವಾಣಿಜ್ಯ ಮಳಿಗೆಗಳನ್ನು ಸುಟ್ಟು ಹಾಕಲಾಗಿದ್ದು, ಹಲವೆಡೆ ಭಾರೀ ಲೂಟಿ ನಡೆದಿದೆ. 220ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದರಲ್ಲಿ 70ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ.

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಶಂಕಿಸಲಾಗಿರುವ 2,500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ರಮಾಫೋಸಾ ಹೇಳಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಈ ಕೃತ್ಯದ ಹಿಂದಿರುವವರು ದಂಗೆಯನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಭದ್ರತಾ ಪಡೆ ಮತ್ತು ದೇಶದ ಜನರ ಸಹಕಾರದಿಂದ ಹಿಂಸಾಚಾರದ ಬೆಂಕಿಯನ್ನು ನಂದಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

“ಹಾನಿಗೊಳಗಾದ ಮೂಲಸೌಕರ್ಯಗಳನ್ನು ಪುನರ್ನಿರ್ಮಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಸಣ್ಣ ಉದ್ಯಮಗಳು ಚೇತರಿಸಿಕೊಂಡು ಮೇಲೆಳಲು ಕಷ್ಟವಾಗುತ್ತದೆ” ಎಂದು ದಕ್ಷಿಣ ಆಫ್ರಿಕಾದ ಅಂಕಿಅಂಶಗಳ ಮುಖ್ಯಸ್ಥ ರಿಸೆಂಗಾ ಮಾಲುಲೆಕೆ ಹೇಳಿದ್ದಾರೆ.

ಹಿಂಸಾಚಾರವು ಇನ್ನಷ್ಟು ನಿರುದ್ಯೋಗಕ್ಕೆ ಕಾರಣವಾಗಲಿದೆ. ಈಗಾಗಲೇ ಹೆಚ್ಚಿನ ಜನರು ಕಡಿಮೆ ಉದ್ಯೋಗಾವಕಾಶ ಮತ್ತು ಸೀಮಿತ ಶಿಕ್ಷಣದ ಅವಕಾಶಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕನ್ನರಲ್ಲಿ ಅರ್ಧದಷ್ಟು ಜನರು ಅಧಿಕೃತ ಬಡತನ ರೇಖೆಗಿಂತ ಕೆಳಗಿದ್ದಾರೆ. 2021 ರ ಮೊದಲ ಮೂರು ತಿಂಗಳಲ್ಲಿ ನಿರುದ್ಯೋಗವು 32% ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ಆಸ್ತಿ ನಾಶ ಮತ್ತು ಸರಕುಗಳ ಕಳ್ಳತನದಿಂದಾಗಿ ವ್ಯವಹಾರಗಳು ಕುಸಿದಿವೆ. ದೇಶದಲ್ಲಿ ಒಟ್ಟಾರೆಯಾಗಿ ಶತಕೋಟಿ ರಾಂಡ್‌ಗಳಷ್ಟು ನಷ್ಟವಾಗಿದೆ. ಇದರ ಪರಿಣಾಮಗಳು ಮುಂದಿನ ತಿಂಗಳಲ್ಲಿ ಎದುರಾಗಲಿದೆ ಎಂದು ಹೇಳಲಾಗಿದೆ.

ನಾಗರಿಕ ಅಶಾಂತಿಯಿಂದಾದ ಹಾನಿ ಮತ್ತು ಕಳ್ಳತನದಿಂದ 10 ಬಿಲಿಯನ್ ರಾಂಡ್ (3,693.77 ಮಿಲಿಯನ್) ನಷ್ಟವಾಗಿರುವ ಸಾಧ್ಯತೆಯಿದೆ ಎಂದು ಸರ್ಕಾರಿ ಸ್ವಾಮ್ಯದ ವಿಮೆದಾರರಾದ ಸಾಸ್ರಿಯಾ ವ್ಯವಸ್ಥಾಪಕ ನಿರ್ದೇಶಕ ಸೆಡ್ರಿಕ್ ಮಸೊಂಡೊ ಬುಧವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ 2009 ರಿಂದ 2018 ರವರೆಗೆ ಅಧಿಕಾರದಲ್ಲಿದ್ದರು. ಈ ವೇಳೆ ಅವರು ಭ್ರಷ್ಟಾಚಾರ, ವಂಚನೆ, ದರೋಡೆ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...