Homeಅಂತರಾಷ್ಟ್ರೀಯದಕ್ಷಿಣ ಆಫ್ರಿಕಾ ಹಿಂಸಾಚಾರ - 70 ಭಾರತೀಯರು ಮೃತ; ಶತಕೋಟಿ ನಷ್ಟ

ದಕ್ಷಿಣ ಆಫ್ರಿಕಾ ಹಿಂಸಾಚಾರ – 70 ಭಾರತೀಯರು ಮೃತ; ಶತಕೋಟಿ ನಷ್ಟ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಹಿಂಸೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಕಳಿಸಿದೆಯಾರೂ, ಹಿಂಸಾಚಾರದಿಂದಾಗಿ ದೇಶಕ್ಕೆ ಶತಕೋಟಿ ರಾಂಡ್ (ಆಫ್ರಿಕಾ ಕರೆನ್ಸಿ) ನಷ್ಟವಾಗಿದೆ ಎಂದು ಅಧ್ಯಕ್ಷ ಸಿರಿಲ್ ರಾಮಾಫೋಸಾ ಶುಕ್ರವಾರ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನದ ನಂತರ ಕಳೆದ ವಾರ ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಹಲವಾರು ವಾಣಿಜ್ಯ ಮಳಿಗೆಗಳನ್ನು ಸುಟ್ಟು ಹಾಕಲಾಗಿದ್ದು, ಹಲವೆಡೆ ಭಾರೀ ಲೂಟಿ ನಡೆದಿದೆ. 220ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದರಲ್ಲಿ 70ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ.

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಶಂಕಿಸಲಾಗಿರುವ 2,500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ರಮಾಫೋಸಾ ಹೇಳಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಈ ಕೃತ್ಯದ ಹಿಂದಿರುವವರು ದಂಗೆಯನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಭದ್ರತಾ ಪಡೆ ಮತ್ತು ದೇಶದ ಜನರ ಸಹಕಾರದಿಂದ ಹಿಂಸಾಚಾರದ ಬೆಂಕಿಯನ್ನು ನಂದಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

“ಹಾನಿಗೊಳಗಾದ ಮೂಲಸೌಕರ್ಯಗಳನ್ನು ಪುನರ್ನಿರ್ಮಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಸಣ್ಣ ಉದ್ಯಮಗಳು ಚೇತರಿಸಿಕೊಂಡು ಮೇಲೆಳಲು ಕಷ್ಟವಾಗುತ್ತದೆ” ಎಂದು ದಕ್ಷಿಣ ಆಫ್ರಿಕಾದ ಅಂಕಿಅಂಶಗಳ ಮುಖ್ಯಸ್ಥ ರಿಸೆಂಗಾ ಮಾಲುಲೆಕೆ ಹೇಳಿದ್ದಾರೆ.

ಹಿಂಸಾಚಾರವು ಇನ್ನಷ್ಟು ನಿರುದ್ಯೋಗಕ್ಕೆ ಕಾರಣವಾಗಲಿದೆ. ಈಗಾಗಲೇ ಹೆಚ್ಚಿನ ಜನರು ಕಡಿಮೆ ಉದ್ಯೋಗಾವಕಾಶ ಮತ್ತು ಸೀಮಿತ ಶಿಕ್ಷಣದ ಅವಕಾಶಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕನ್ನರಲ್ಲಿ ಅರ್ಧದಷ್ಟು ಜನರು ಅಧಿಕೃತ ಬಡತನ ರೇಖೆಗಿಂತ ಕೆಳಗಿದ್ದಾರೆ. 2021 ರ ಮೊದಲ ಮೂರು ತಿಂಗಳಲ್ಲಿ ನಿರುದ್ಯೋಗವು 32% ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ಆಸ್ತಿ ನಾಶ ಮತ್ತು ಸರಕುಗಳ ಕಳ್ಳತನದಿಂದಾಗಿ ವ್ಯವಹಾರಗಳು ಕುಸಿದಿವೆ. ದೇಶದಲ್ಲಿ ಒಟ್ಟಾರೆಯಾಗಿ ಶತಕೋಟಿ ರಾಂಡ್‌ಗಳಷ್ಟು ನಷ್ಟವಾಗಿದೆ. ಇದರ ಪರಿಣಾಮಗಳು ಮುಂದಿನ ತಿಂಗಳಲ್ಲಿ ಎದುರಾಗಲಿದೆ ಎಂದು ಹೇಳಲಾಗಿದೆ.

ನಾಗರಿಕ ಅಶಾಂತಿಯಿಂದಾದ ಹಾನಿ ಮತ್ತು ಕಳ್ಳತನದಿಂದ 10 ಬಿಲಿಯನ್ ರಾಂಡ್ (3,693.77 ಮಿಲಿಯನ್) ನಷ್ಟವಾಗಿರುವ ಸಾಧ್ಯತೆಯಿದೆ ಎಂದು ಸರ್ಕಾರಿ ಸ್ವಾಮ್ಯದ ವಿಮೆದಾರರಾದ ಸಾಸ್ರಿಯಾ ವ್ಯವಸ್ಥಾಪಕ ನಿರ್ದೇಶಕ ಸೆಡ್ರಿಕ್ ಮಸೊಂಡೊ ಬುಧವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ 2009 ರಿಂದ 2018 ರವರೆಗೆ ಅಧಿಕಾರದಲ್ಲಿದ್ದರು. ಈ ವೇಳೆ ಅವರು ಭ್ರಷ್ಟಾಚಾರ, ವಂಚನೆ, ದರೋಡೆ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...