Homeಅಂತರಾಷ್ಟ್ರೀಯದಕ್ಷಿಣ ಆಫ್ರಿಕಾ ಹಿಂಸಾಚಾರ - 70 ಭಾರತೀಯರು ಮೃತ; ಶತಕೋಟಿ ನಷ್ಟ

ದಕ್ಷಿಣ ಆಫ್ರಿಕಾ ಹಿಂಸಾಚಾರ – 70 ಭಾರತೀಯರು ಮೃತ; ಶತಕೋಟಿ ನಷ್ಟ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಹಿಂಸೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಕಳಿಸಿದೆಯಾರೂ, ಹಿಂಸಾಚಾರದಿಂದಾಗಿ ದೇಶಕ್ಕೆ ಶತಕೋಟಿ ರಾಂಡ್ (ಆಫ್ರಿಕಾ ಕರೆನ್ಸಿ) ನಷ್ಟವಾಗಿದೆ ಎಂದು ಅಧ್ಯಕ್ಷ ಸಿರಿಲ್ ರಾಮಾಫೋಸಾ ಶುಕ್ರವಾರ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನದ ನಂತರ ಕಳೆದ ವಾರ ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಹಲವಾರು ವಾಣಿಜ್ಯ ಮಳಿಗೆಗಳನ್ನು ಸುಟ್ಟು ಹಾಕಲಾಗಿದ್ದು, ಹಲವೆಡೆ ಭಾರೀ ಲೂಟಿ ನಡೆದಿದೆ. 220ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದರಲ್ಲಿ 70ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ.

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಶಂಕಿಸಲಾಗಿರುವ 2,500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ರಮಾಫೋಸಾ ಹೇಳಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಈ ಕೃತ್ಯದ ಹಿಂದಿರುವವರು ದಂಗೆಯನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಭದ್ರತಾ ಪಡೆ ಮತ್ತು ದೇಶದ ಜನರ ಸಹಕಾರದಿಂದ ಹಿಂಸಾಚಾರದ ಬೆಂಕಿಯನ್ನು ನಂದಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

“ಹಾನಿಗೊಳಗಾದ ಮೂಲಸೌಕರ್ಯಗಳನ್ನು ಪುನರ್ನಿರ್ಮಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಸಣ್ಣ ಉದ್ಯಮಗಳು ಚೇತರಿಸಿಕೊಂಡು ಮೇಲೆಳಲು ಕಷ್ಟವಾಗುತ್ತದೆ” ಎಂದು ದಕ್ಷಿಣ ಆಫ್ರಿಕಾದ ಅಂಕಿಅಂಶಗಳ ಮುಖ್ಯಸ್ಥ ರಿಸೆಂಗಾ ಮಾಲುಲೆಕೆ ಹೇಳಿದ್ದಾರೆ.

ಹಿಂಸಾಚಾರವು ಇನ್ನಷ್ಟು ನಿರುದ್ಯೋಗಕ್ಕೆ ಕಾರಣವಾಗಲಿದೆ. ಈಗಾಗಲೇ ಹೆಚ್ಚಿನ ಜನರು ಕಡಿಮೆ ಉದ್ಯೋಗಾವಕಾಶ ಮತ್ತು ಸೀಮಿತ ಶಿಕ್ಷಣದ ಅವಕಾಶಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕನ್ನರಲ್ಲಿ ಅರ್ಧದಷ್ಟು ಜನರು ಅಧಿಕೃತ ಬಡತನ ರೇಖೆಗಿಂತ ಕೆಳಗಿದ್ದಾರೆ. 2021 ರ ಮೊದಲ ಮೂರು ತಿಂಗಳಲ್ಲಿ ನಿರುದ್ಯೋಗವು 32% ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ಆಸ್ತಿ ನಾಶ ಮತ್ತು ಸರಕುಗಳ ಕಳ್ಳತನದಿಂದಾಗಿ ವ್ಯವಹಾರಗಳು ಕುಸಿದಿವೆ. ದೇಶದಲ್ಲಿ ಒಟ್ಟಾರೆಯಾಗಿ ಶತಕೋಟಿ ರಾಂಡ್‌ಗಳಷ್ಟು ನಷ್ಟವಾಗಿದೆ. ಇದರ ಪರಿಣಾಮಗಳು ಮುಂದಿನ ತಿಂಗಳಲ್ಲಿ ಎದುರಾಗಲಿದೆ ಎಂದು ಹೇಳಲಾಗಿದೆ.

ನಾಗರಿಕ ಅಶಾಂತಿಯಿಂದಾದ ಹಾನಿ ಮತ್ತು ಕಳ್ಳತನದಿಂದ 10 ಬಿಲಿಯನ್ ರಾಂಡ್ (3,693.77 ಮಿಲಿಯನ್) ನಷ್ಟವಾಗಿರುವ ಸಾಧ್ಯತೆಯಿದೆ ಎಂದು ಸರ್ಕಾರಿ ಸ್ವಾಮ್ಯದ ವಿಮೆದಾರರಾದ ಸಾಸ್ರಿಯಾ ವ್ಯವಸ್ಥಾಪಕ ನಿರ್ದೇಶಕ ಸೆಡ್ರಿಕ್ ಮಸೊಂಡೊ ಬುಧವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ 2009 ರಿಂದ 2018 ರವರೆಗೆ ಅಧಿಕಾರದಲ್ಲಿದ್ದರು. ಈ ವೇಳೆ ಅವರು ಭ್ರಷ್ಟಾಚಾರ, ವಂಚನೆ, ದರೋಡೆ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...