Homeಅಂತರಾಷ್ಟ್ರೀಯದಕ್ಷಿಣ ಆಫ್ರಿಕಾ ಹಿಂಸಾಚಾರ - 70 ಭಾರತೀಯರು ಮೃತ; ಶತಕೋಟಿ ನಷ್ಟ

ದಕ್ಷಿಣ ಆಫ್ರಿಕಾ ಹಿಂಸಾಚಾರ – 70 ಭಾರತೀಯರು ಮೃತ; ಶತಕೋಟಿ ನಷ್ಟ

- Advertisement -
- Advertisement -

ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಹಿಂಸೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಕಳಿಸಿದೆಯಾರೂ, ಹಿಂಸಾಚಾರದಿಂದಾಗಿ ದೇಶಕ್ಕೆ ಶತಕೋಟಿ ರಾಂಡ್ (ಆಫ್ರಿಕಾ ಕರೆನ್ಸಿ) ನಷ್ಟವಾಗಿದೆ ಎಂದು ಅಧ್ಯಕ್ಷ ಸಿರಿಲ್ ರಾಮಾಫೋಸಾ ಶುಕ್ರವಾರ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನದ ನಂತರ ಕಳೆದ ವಾರ ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಹಲವಾರು ವಾಣಿಜ್ಯ ಮಳಿಗೆಗಳನ್ನು ಸುಟ್ಟು ಹಾಕಲಾಗಿದ್ದು, ಹಲವೆಡೆ ಭಾರೀ ಲೂಟಿ ನಡೆದಿದೆ. 220ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದರಲ್ಲಿ 70ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ.

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಶಂಕಿಸಲಾಗಿರುವ 2,500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ರಮಾಫೋಸಾ ಹೇಳಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಈ ಕೃತ್ಯದ ಹಿಂದಿರುವವರು ದಂಗೆಯನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಭದ್ರತಾ ಪಡೆ ಮತ್ತು ದೇಶದ ಜನರ ಸಹಕಾರದಿಂದ ಹಿಂಸಾಚಾರದ ಬೆಂಕಿಯನ್ನು ನಂದಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

“ಹಾನಿಗೊಳಗಾದ ಮೂಲಸೌಕರ್ಯಗಳನ್ನು ಪುನರ್ನಿರ್ಮಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಸಣ್ಣ ಉದ್ಯಮಗಳು ಚೇತರಿಸಿಕೊಂಡು ಮೇಲೆಳಲು ಕಷ್ಟವಾಗುತ್ತದೆ” ಎಂದು ದಕ್ಷಿಣ ಆಫ್ರಿಕಾದ ಅಂಕಿಅಂಶಗಳ ಮುಖ್ಯಸ್ಥ ರಿಸೆಂಗಾ ಮಾಲುಲೆಕೆ ಹೇಳಿದ್ದಾರೆ.

ಹಿಂಸಾಚಾರವು ಇನ್ನಷ್ಟು ನಿರುದ್ಯೋಗಕ್ಕೆ ಕಾರಣವಾಗಲಿದೆ. ಈಗಾಗಲೇ ಹೆಚ್ಚಿನ ಜನರು ಕಡಿಮೆ ಉದ್ಯೋಗಾವಕಾಶ ಮತ್ತು ಸೀಮಿತ ಶಿಕ್ಷಣದ ಅವಕಾಶಗಳನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕನ್ನರಲ್ಲಿ ಅರ್ಧದಷ್ಟು ಜನರು ಅಧಿಕೃತ ಬಡತನ ರೇಖೆಗಿಂತ ಕೆಳಗಿದ್ದಾರೆ. 2021 ರ ಮೊದಲ ಮೂರು ತಿಂಗಳಲ್ಲಿ ನಿರುದ್ಯೋಗವು 32% ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ಆಸ್ತಿ ನಾಶ ಮತ್ತು ಸರಕುಗಳ ಕಳ್ಳತನದಿಂದಾಗಿ ವ್ಯವಹಾರಗಳು ಕುಸಿದಿವೆ. ದೇಶದಲ್ಲಿ ಒಟ್ಟಾರೆಯಾಗಿ ಶತಕೋಟಿ ರಾಂಡ್‌ಗಳಷ್ಟು ನಷ್ಟವಾಗಿದೆ. ಇದರ ಪರಿಣಾಮಗಳು ಮುಂದಿನ ತಿಂಗಳಲ್ಲಿ ಎದುರಾಗಲಿದೆ ಎಂದು ಹೇಳಲಾಗಿದೆ.

ನಾಗರಿಕ ಅಶಾಂತಿಯಿಂದಾದ ಹಾನಿ ಮತ್ತು ಕಳ್ಳತನದಿಂದ 10 ಬಿಲಿಯನ್ ರಾಂಡ್ (3,693.77 ಮಿಲಿಯನ್) ನಷ್ಟವಾಗಿರುವ ಸಾಧ್ಯತೆಯಿದೆ ಎಂದು ಸರ್ಕಾರಿ ಸ್ವಾಮ್ಯದ ವಿಮೆದಾರರಾದ ಸಾಸ್ರಿಯಾ ವ್ಯವಸ್ಥಾಪಕ ನಿರ್ದೇಶಕ ಸೆಡ್ರಿಕ್ ಮಸೊಂಡೊ ಬುಧವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ 2009 ರಿಂದ 2018 ರವರೆಗೆ ಅಧಿಕಾರದಲ್ಲಿದ್ದರು. ಈ ವೇಳೆ ಅವರು ಭ್ರಷ್ಟಾಚಾರ, ವಂಚನೆ, ದರೋಡೆ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...