Homeಮುಖಪುಟಮೋದಿ ಕುರಿತು ಸುದ್ದಿ ಮಾಡಿದ ಬಳಿಕ 'ಸೈಬರ್ ದಾಳಿ" ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ...

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ ‘ಸೈಬರ್ ದಾಳಿ” ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ ವೆಬ್‌ಸೈಟ್

- Advertisement -
- Advertisement -

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ  ದಕ್ಷಿಣ ಆಫ್ರಿಕಾದ ಸುದ್ದಿ ವೆಬ್‌ಸೈಟ್ ‘ಡೈಲಿ ಮೇವರಿಕ್’ ಬುಧವಾರ (ಆಗಸ್ಟ್ 23) ಸೈಬರ್ ದಾಳಿಗೆ ಒಳಗಾಗಿದೆ ಎಂದು ಹೇಳಿಕೊಂಡಿದೆ. ಡೈಲಿ ಮೇವರಿಕ್ ತನ್ನ ವರದಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದಕ್ಷಿಣ ಆಫ್ರಿಕಾದ ಪ್ರಧಾನಿ ಸ್ವಾಗತಿಸದಿರುವುದು ಅಸಮಾಧಾನವಾಗಿದೆ. ಅವರು ವಿಮಾನದಿಂದ ಕೆಳಗಿಳಿಯಲು ನಿರಾಕರಿಸಿದ್ದರು ಎಂದು ವೆಬ್ ಸೈಟ್ ವರದಿ  ಮಾಡಿತ್ತು.

ಮೋದಿ ಕುರಿತ ಈ ಸುದ್ದಿ ಪ್ರಕಟಿಸಿದ ಬಳಿಕ  ಡೈಲಿ ಮೇವರಿಕ್  ವೆಬ್ ‘ಸೈಬರ್ ದಾಳಿ’ಗೆ ಒಳಗಾಗಿದೆ ಎಂದು ವೆಬ್ ಸೈಟ್ X (Twitter) ನ ಪ್ರಕಟಣೆಯಲ್ಲಿ  ಹೇಳಿದೆ.

ಸೈಬರ್  ದಾಳಿಯು ಟಾರ್ಗೆಟ್ ಮಾಡಿದ ಸರ್ವರ್ ನ ಟ್ರಾಫಿಕ್ ಗೆ ಅಡ್ಡಿಪಡಿಸುವ ಯತ್ನವನ್ನು ಮಾಡಿದೆ. ಸೈಟ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ನಾವು ಅದನ್ನು ಬಹಳ ಬೇಗನೆ ಪರಿಶೀಲಿಸಿದಾಗ ಸಂಪೂರ್ಣ ಭಾರತೀಯ ಸರ್ವರ್‌ಗಳಿಂದ  ಸಮಸ್ಯೆ ಎದುರಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ಬುಧವಾರ ರಾತ್ರಿ 11:30 ಕ್ಕೆ ಡೈಲಿ ಮೇವರಿಕ್‌ನ ಭದ್ರತಾ ಸಂಯೋಜಕರು ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. BRICS ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ  ದೇಶದ ಒಂದು ಒಕ್ಕೂಟವಾಗಿದೆ.

ಮಂಗಳವಾರದ ಡೈಲಿ ಮಾವೆರಿಕ್ ವರದಿಯ ಪ್ರಕಾರ, ಮೋದಿ ಅವರು ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ಗೆ ಬಂದಿಳಿದಾಗ, ಅವರು ವಿಮಾನದಿಂದ ಕೆಳಗಿಳಿಯಲು  ನಿರಾಕರಿಸಿದರು ಏಕೆಂದರೆ ಅಧ್ಯಕ್ಷ ಸಿರಿಲ್ ರಾಂಫೋಸಾ ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿ ಅವರನ್ನು ಸ್ವಾಗತಿಸಲು ಬಂದಿದ್ದರು. ರಾಂಫೋಸಾ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಿದ್ದರು ಎಂದು ಹೇಳಿ ವರದಿ ಮಾಡಿತ್ತು.

ಭಾರತದ ಜನರಿಗೆ ಈ ಸ್ಟೋರಿ  ಓದದಂತೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಡೈಲಿ ಮಾವೆರಿಕ್‌ನ ಪ್ರಧಾನ ಸಂಪಾದಕ ಬ್ರಾಂಕೊ ಬ್ರಿಕಿಕ್ ಹೇಳಿದ್ದಾರೆ. ವೆಬ್‌ಸೈಟ್ ಪ್ರಸ್ತುತ ಭಾರತದಲ್ಲಿ ಲಭ್ಯವಾಗುತ್ತಿಲ್ಲ. ಡೈಲಿ ಮಾವೆರಿಕ್ ಭಾರತದ ಓದುಗರಿಗೆ ಲೇಖನವನ್ನು ತಲುಪುವಂತೆ ಮಾಡಲು  ಪ್ರಯತ್ನಿಸುತ್ತಿದೆ ಎಂದು ಹೇಳಿದೆ.

ಬುಧವಾರ ಸಂಜೆ, ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷರ  ಕಚೇರಿ ಈ  ಸ್ಟೋರಿಯನ್ನು ನಿರಾಕರಿಸಿದೆ. ಡೈಲಿ ಮೇವರಿಕ್ ಸುಳ್ಳು ವರದಿ ಮಾಡಿದೆ ಎಂದು ಹೇಳಿದೆ. ಭಾರತದ ಪ್ರಧಾನಿ ಆಗಮಿಸುತ್ತಾರೆ ಮತ್ತು ಅವರು ಅವರನ್ನು ಬರಮಾಡಿಕೊಳ್ಳಬೇಕು ಎಂದು ಉಪರಾಷ್ಟ್ರಪತಿಗೆ ಮೊದಲೇ ತಿಳಿದಿತ್ತು. ಪ್ರಧಾನಿ ಇಳಿಯುವ ಮೊದಲೇ ಅವರು ಅಲ್ಲಿದ್ದರು ಎಂದು ವಕ್ತಾರರು ಹೇಳಿದ್ದಾರೆ.

ಇದನ್ನು ಒದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್ ಐಆರ್ ದಾಖಲಿಸಲು ಸೂಚಿಸಿದ್ದ ಜಡ್ಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...