Homeಮುಖಪುಟಮೋದಿ ಕುರಿತು ಸುದ್ದಿ ಮಾಡಿದ ಬಳಿಕ 'ಸೈಬರ್ ದಾಳಿ" ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ...

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ ‘ಸೈಬರ್ ದಾಳಿ” ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ ವೆಬ್‌ಸೈಟ್

- Advertisement -
- Advertisement -

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ  ದಕ್ಷಿಣ ಆಫ್ರಿಕಾದ ಸುದ್ದಿ ವೆಬ್‌ಸೈಟ್ ‘ಡೈಲಿ ಮೇವರಿಕ್’ ಬುಧವಾರ (ಆಗಸ್ಟ್ 23) ಸೈಬರ್ ದಾಳಿಗೆ ಒಳಗಾಗಿದೆ ಎಂದು ಹೇಳಿಕೊಂಡಿದೆ. ಡೈಲಿ ಮೇವರಿಕ್ ತನ್ನ ವರದಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದಕ್ಷಿಣ ಆಫ್ರಿಕಾದ ಪ್ರಧಾನಿ ಸ್ವಾಗತಿಸದಿರುವುದು ಅಸಮಾಧಾನವಾಗಿದೆ. ಅವರು ವಿಮಾನದಿಂದ ಕೆಳಗಿಳಿಯಲು ನಿರಾಕರಿಸಿದ್ದರು ಎಂದು ವೆಬ್ ಸೈಟ್ ವರದಿ  ಮಾಡಿತ್ತು.

ಮೋದಿ ಕುರಿತ ಈ ಸುದ್ದಿ ಪ್ರಕಟಿಸಿದ ಬಳಿಕ  ಡೈಲಿ ಮೇವರಿಕ್  ವೆಬ್ ‘ಸೈಬರ್ ದಾಳಿ’ಗೆ ಒಳಗಾಗಿದೆ ಎಂದು ವೆಬ್ ಸೈಟ್ X (Twitter) ನ ಪ್ರಕಟಣೆಯಲ್ಲಿ  ಹೇಳಿದೆ.

ಸೈಬರ್  ದಾಳಿಯು ಟಾರ್ಗೆಟ್ ಮಾಡಿದ ಸರ್ವರ್ ನ ಟ್ರಾಫಿಕ್ ಗೆ ಅಡ್ಡಿಪಡಿಸುವ ಯತ್ನವನ್ನು ಮಾಡಿದೆ. ಸೈಟ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ನಾವು ಅದನ್ನು ಬಹಳ ಬೇಗನೆ ಪರಿಶೀಲಿಸಿದಾಗ ಸಂಪೂರ್ಣ ಭಾರತೀಯ ಸರ್ವರ್‌ಗಳಿಂದ  ಸಮಸ್ಯೆ ಎದುರಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ಬುಧವಾರ ರಾತ್ರಿ 11:30 ಕ್ಕೆ ಡೈಲಿ ಮೇವರಿಕ್‌ನ ಭದ್ರತಾ ಸಂಯೋಜಕರು ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. BRICS ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ  ದೇಶದ ಒಂದು ಒಕ್ಕೂಟವಾಗಿದೆ.

ಮಂಗಳವಾರದ ಡೈಲಿ ಮಾವೆರಿಕ್ ವರದಿಯ ಪ್ರಕಾರ, ಮೋದಿ ಅವರು ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ಗೆ ಬಂದಿಳಿದಾಗ, ಅವರು ವಿಮಾನದಿಂದ ಕೆಳಗಿಳಿಯಲು  ನಿರಾಕರಿಸಿದರು ಏಕೆಂದರೆ ಅಧ್ಯಕ್ಷ ಸಿರಿಲ್ ರಾಂಫೋಸಾ ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿ ಅವರನ್ನು ಸ್ವಾಗತಿಸಲು ಬಂದಿದ್ದರು. ರಾಂಫೋಸಾ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಿದ್ದರು ಎಂದು ಹೇಳಿ ವರದಿ ಮಾಡಿತ್ತು.

ಭಾರತದ ಜನರಿಗೆ ಈ ಸ್ಟೋರಿ  ಓದದಂತೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಡೈಲಿ ಮಾವೆರಿಕ್‌ನ ಪ್ರಧಾನ ಸಂಪಾದಕ ಬ್ರಾಂಕೊ ಬ್ರಿಕಿಕ್ ಹೇಳಿದ್ದಾರೆ. ವೆಬ್‌ಸೈಟ್ ಪ್ರಸ್ತುತ ಭಾರತದಲ್ಲಿ ಲಭ್ಯವಾಗುತ್ತಿಲ್ಲ. ಡೈಲಿ ಮಾವೆರಿಕ್ ಭಾರತದ ಓದುಗರಿಗೆ ಲೇಖನವನ್ನು ತಲುಪುವಂತೆ ಮಾಡಲು  ಪ್ರಯತ್ನಿಸುತ್ತಿದೆ ಎಂದು ಹೇಳಿದೆ.

ಬುಧವಾರ ಸಂಜೆ, ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷರ  ಕಚೇರಿ ಈ  ಸ್ಟೋರಿಯನ್ನು ನಿರಾಕರಿಸಿದೆ. ಡೈಲಿ ಮೇವರಿಕ್ ಸುಳ್ಳು ವರದಿ ಮಾಡಿದೆ ಎಂದು ಹೇಳಿದೆ. ಭಾರತದ ಪ್ರಧಾನಿ ಆಗಮಿಸುತ್ತಾರೆ ಮತ್ತು ಅವರು ಅವರನ್ನು ಬರಮಾಡಿಕೊಳ್ಳಬೇಕು ಎಂದು ಉಪರಾಷ್ಟ್ರಪತಿಗೆ ಮೊದಲೇ ತಿಳಿದಿತ್ತು. ಪ್ರಧಾನಿ ಇಳಿಯುವ ಮೊದಲೇ ಅವರು ಅಲ್ಲಿದ್ದರು ಎಂದು ವಕ್ತಾರರು ಹೇಳಿದ್ದಾರೆ.

ಇದನ್ನು ಒದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್ ಐಆರ್ ದಾಖಲಿಸಲು ಸೂಚಿಸಿದ್ದ ಜಡ್ಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...