Homeಮುಖಪುಟಮೋದಿ ಕುರಿತು ಸುದ್ದಿ ಮಾಡಿದ ಬಳಿಕ 'ಸೈಬರ್ ದಾಳಿ" ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ...

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ ‘ಸೈಬರ್ ದಾಳಿ” ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ ವೆಬ್‌ಸೈಟ್

- Advertisement -
- Advertisement -

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ  ದಕ್ಷಿಣ ಆಫ್ರಿಕಾದ ಸುದ್ದಿ ವೆಬ್‌ಸೈಟ್ ‘ಡೈಲಿ ಮೇವರಿಕ್’ ಬುಧವಾರ (ಆಗಸ್ಟ್ 23) ಸೈಬರ್ ದಾಳಿಗೆ ಒಳಗಾಗಿದೆ ಎಂದು ಹೇಳಿಕೊಂಡಿದೆ. ಡೈಲಿ ಮೇವರಿಕ್ ತನ್ನ ವರದಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದಕ್ಷಿಣ ಆಫ್ರಿಕಾದ ಪ್ರಧಾನಿ ಸ್ವಾಗತಿಸದಿರುವುದು ಅಸಮಾಧಾನವಾಗಿದೆ. ಅವರು ವಿಮಾನದಿಂದ ಕೆಳಗಿಳಿಯಲು ನಿರಾಕರಿಸಿದ್ದರು ಎಂದು ವೆಬ್ ಸೈಟ್ ವರದಿ  ಮಾಡಿತ್ತು.

ಮೋದಿ ಕುರಿತ ಈ ಸುದ್ದಿ ಪ್ರಕಟಿಸಿದ ಬಳಿಕ  ಡೈಲಿ ಮೇವರಿಕ್  ವೆಬ್ ‘ಸೈಬರ್ ದಾಳಿ’ಗೆ ಒಳಗಾಗಿದೆ ಎಂದು ವೆಬ್ ಸೈಟ್ X (Twitter) ನ ಪ್ರಕಟಣೆಯಲ್ಲಿ  ಹೇಳಿದೆ.

ಸೈಬರ್  ದಾಳಿಯು ಟಾರ್ಗೆಟ್ ಮಾಡಿದ ಸರ್ವರ್ ನ ಟ್ರಾಫಿಕ್ ಗೆ ಅಡ್ಡಿಪಡಿಸುವ ಯತ್ನವನ್ನು ಮಾಡಿದೆ. ಸೈಟ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ನಾವು ಅದನ್ನು ಬಹಳ ಬೇಗನೆ ಪರಿಶೀಲಿಸಿದಾಗ ಸಂಪೂರ್ಣ ಭಾರತೀಯ ಸರ್ವರ್‌ಗಳಿಂದ  ಸಮಸ್ಯೆ ಎದುರಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ಬುಧವಾರ ರಾತ್ರಿ 11:30 ಕ್ಕೆ ಡೈಲಿ ಮೇವರಿಕ್‌ನ ಭದ್ರತಾ ಸಂಯೋಜಕರು ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. BRICS ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ  ದೇಶದ ಒಂದು ಒಕ್ಕೂಟವಾಗಿದೆ.

ಮಂಗಳವಾರದ ಡೈಲಿ ಮಾವೆರಿಕ್ ವರದಿಯ ಪ್ರಕಾರ, ಮೋದಿ ಅವರು ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ಗೆ ಬಂದಿಳಿದಾಗ, ಅವರು ವಿಮಾನದಿಂದ ಕೆಳಗಿಳಿಯಲು  ನಿರಾಕರಿಸಿದರು ಏಕೆಂದರೆ ಅಧ್ಯಕ್ಷ ಸಿರಿಲ್ ರಾಂಫೋಸಾ ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿ ಅವರನ್ನು ಸ್ವಾಗತಿಸಲು ಬಂದಿದ್ದರು. ರಾಂಫೋಸಾ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಿದ್ದರು ಎಂದು ಹೇಳಿ ವರದಿ ಮಾಡಿತ್ತು.

ಭಾರತದ ಜನರಿಗೆ ಈ ಸ್ಟೋರಿ  ಓದದಂತೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಡೈಲಿ ಮಾವೆರಿಕ್‌ನ ಪ್ರಧಾನ ಸಂಪಾದಕ ಬ್ರಾಂಕೊ ಬ್ರಿಕಿಕ್ ಹೇಳಿದ್ದಾರೆ. ವೆಬ್‌ಸೈಟ್ ಪ್ರಸ್ತುತ ಭಾರತದಲ್ಲಿ ಲಭ್ಯವಾಗುತ್ತಿಲ್ಲ. ಡೈಲಿ ಮಾವೆರಿಕ್ ಭಾರತದ ಓದುಗರಿಗೆ ಲೇಖನವನ್ನು ತಲುಪುವಂತೆ ಮಾಡಲು  ಪ್ರಯತ್ನಿಸುತ್ತಿದೆ ಎಂದು ಹೇಳಿದೆ.

ಬುಧವಾರ ಸಂಜೆ, ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷರ  ಕಚೇರಿ ಈ  ಸ್ಟೋರಿಯನ್ನು ನಿರಾಕರಿಸಿದೆ. ಡೈಲಿ ಮೇವರಿಕ್ ಸುಳ್ಳು ವರದಿ ಮಾಡಿದೆ ಎಂದು ಹೇಳಿದೆ. ಭಾರತದ ಪ್ರಧಾನಿ ಆಗಮಿಸುತ್ತಾರೆ ಮತ್ತು ಅವರು ಅವರನ್ನು ಬರಮಾಡಿಕೊಳ್ಳಬೇಕು ಎಂದು ಉಪರಾಷ್ಟ್ರಪತಿಗೆ ಮೊದಲೇ ತಿಳಿದಿತ್ತು. ಪ್ರಧಾನಿ ಇಳಿಯುವ ಮೊದಲೇ ಅವರು ಅಲ್ಲಿದ್ದರು ಎಂದು ವಕ್ತಾರರು ಹೇಳಿದ್ದಾರೆ.

ಇದನ್ನು ಒದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್ ಐಆರ್ ದಾಖಲಿಸಲು ಸೂಚಿಸಿದ್ದ ಜಡ್ಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...