Homeಮುಖಪುಟಮೋದಿ ಕುರಿತು ಸುದ್ದಿ ಮಾಡಿದ ಬಳಿಕ 'ಸೈಬರ್ ದಾಳಿ" ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ...

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ ‘ಸೈಬರ್ ದಾಳಿ” ನಡೆದಿದೆ ಎಂದ ದ. ಆಫ್ರಿಕಾದ ಸುದ್ದಿ ವೆಬ್‌ಸೈಟ್

- Advertisement -
- Advertisement -

ಮೋದಿ ಕುರಿತು ಸುದ್ದಿ ಮಾಡಿದ ಬಳಿಕ  ದಕ್ಷಿಣ ಆಫ್ರಿಕಾದ ಸುದ್ದಿ ವೆಬ್‌ಸೈಟ್ ‘ಡೈಲಿ ಮೇವರಿಕ್’ ಬುಧವಾರ (ಆಗಸ್ಟ್ 23) ಸೈಬರ್ ದಾಳಿಗೆ ಒಳಗಾಗಿದೆ ಎಂದು ಹೇಳಿಕೊಂಡಿದೆ. ಡೈಲಿ ಮೇವರಿಕ್ ತನ್ನ ವರದಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದಕ್ಷಿಣ ಆಫ್ರಿಕಾದ ಪ್ರಧಾನಿ ಸ್ವಾಗತಿಸದಿರುವುದು ಅಸಮಾಧಾನವಾಗಿದೆ. ಅವರು ವಿಮಾನದಿಂದ ಕೆಳಗಿಳಿಯಲು ನಿರಾಕರಿಸಿದ್ದರು ಎಂದು ವೆಬ್ ಸೈಟ್ ವರದಿ  ಮಾಡಿತ್ತು.

ಮೋದಿ ಕುರಿತ ಈ ಸುದ್ದಿ ಪ್ರಕಟಿಸಿದ ಬಳಿಕ  ಡೈಲಿ ಮೇವರಿಕ್  ವೆಬ್ ‘ಸೈಬರ್ ದಾಳಿ’ಗೆ ಒಳಗಾಗಿದೆ ಎಂದು ವೆಬ್ ಸೈಟ್ X (Twitter) ನ ಪ್ರಕಟಣೆಯಲ್ಲಿ  ಹೇಳಿದೆ.

ಸೈಬರ್  ದಾಳಿಯು ಟಾರ್ಗೆಟ್ ಮಾಡಿದ ಸರ್ವರ್ ನ ಟ್ರಾಫಿಕ್ ಗೆ ಅಡ್ಡಿಪಡಿಸುವ ಯತ್ನವನ್ನು ಮಾಡಿದೆ. ಸೈಟ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ನಾವು ಅದನ್ನು ಬಹಳ ಬೇಗನೆ ಪರಿಶೀಲಿಸಿದಾಗ ಸಂಪೂರ್ಣ ಭಾರತೀಯ ಸರ್ವರ್‌ಗಳಿಂದ  ಸಮಸ್ಯೆ ಎದುರಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ಬುಧವಾರ ರಾತ್ರಿ 11:30 ಕ್ಕೆ ಡೈಲಿ ಮೇವರಿಕ್‌ನ ಭದ್ರತಾ ಸಂಯೋಜಕರು ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. BRICS ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ  ದೇಶದ ಒಂದು ಒಕ್ಕೂಟವಾಗಿದೆ.

ಮಂಗಳವಾರದ ಡೈಲಿ ಮಾವೆರಿಕ್ ವರದಿಯ ಪ್ರಕಾರ, ಮೋದಿ ಅವರು ವಾಟರ್‌ಕ್ಲೂಫ್ ಏರ್ ಫೋರ್ಸ್ ಬೇಸ್‌ಗೆ ಬಂದಿಳಿದಾಗ, ಅವರು ವಿಮಾನದಿಂದ ಕೆಳಗಿಳಿಯಲು  ನಿರಾಕರಿಸಿದರು ಏಕೆಂದರೆ ಅಧ್ಯಕ್ಷ ಸಿರಿಲ್ ರಾಂಫೋಸಾ ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿ ಅವರನ್ನು ಸ್ವಾಗತಿಸಲು ಬಂದಿದ್ದರು. ರಾಂಫೋಸಾ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಿದ್ದರು ಎಂದು ಹೇಳಿ ವರದಿ ಮಾಡಿತ್ತು.

ಭಾರತದ ಜನರಿಗೆ ಈ ಸ್ಟೋರಿ  ಓದದಂತೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಡೈಲಿ ಮಾವೆರಿಕ್‌ನ ಪ್ರಧಾನ ಸಂಪಾದಕ ಬ್ರಾಂಕೊ ಬ್ರಿಕಿಕ್ ಹೇಳಿದ್ದಾರೆ. ವೆಬ್‌ಸೈಟ್ ಪ್ರಸ್ತುತ ಭಾರತದಲ್ಲಿ ಲಭ್ಯವಾಗುತ್ತಿಲ್ಲ. ಡೈಲಿ ಮಾವೆರಿಕ್ ಭಾರತದ ಓದುಗರಿಗೆ ಲೇಖನವನ್ನು ತಲುಪುವಂತೆ ಮಾಡಲು  ಪ್ರಯತ್ನಿಸುತ್ತಿದೆ ಎಂದು ಹೇಳಿದೆ.

ಬುಧವಾರ ಸಂಜೆ, ದಕ್ಷಿಣ ಆಫ್ರಿಕಾದ ಉಪಾಧ್ಯಕ್ಷರ  ಕಚೇರಿ ಈ  ಸ್ಟೋರಿಯನ್ನು ನಿರಾಕರಿಸಿದೆ. ಡೈಲಿ ಮೇವರಿಕ್ ಸುಳ್ಳು ವರದಿ ಮಾಡಿದೆ ಎಂದು ಹೇಳಿದೆ. ಭಾರತದ ಪ್ರಧಾನಿ ಆಗಮಿಸುತ್ತಾರೆ ಮತ್ತು ಅವರು ಅವರನ್ನು ಬರಮಾಡಿಕೊಳ್ಳಬೇಕು ಎಂದು ಉಪರಾಷ್ಟ್ರಪತಿಗೆ ಮೊದಲೇ ತಿಳಿದಿತ್ತು. ಪ್ರಧಾನಿ ಇಳಿಯುವ ಮೊದಲೇ ಅವರು ಅಲ್ಲಿದ್ದರು ಎಂದು ವಕ್ತಾರರು ಹೇಳಿದ್ದಾರೆ.

ಇದನ್ನು ಒದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್ ಐಆರ್ ದಾಖಲಿಸಲು ಸೂಚಿಸಿದ್ದ ಜಡ್ಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...