Homeಅಂತರಾಷ್ಟ್ರೀಯವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ...

ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ಖಂಡನೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ, ಟ್ರಂಪ್ ಆಡಳಿತವು ಗುರುವಾರ (ಮೇ.22) ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕ ಕಾರ್ಯಕ್ರಮ (ಎಸ್‌ಇವಿಪಿ) ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಅಮೆರಿಕದ ಗೃಹ ಭದ್ರತಾ ಇಲಾಖೆಗೆ ಆದೇಶಿಸಿದೆ.

ಇದರರ್ಥ ಹಾರ್ವರ್ಡ್ ಇನ್ನು ಮುಂದೆ ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಪ್ರಸ್ತುತ ಇರುವ ವಿದೇಶಿ ವಿದ್ಯಾರ್ಥಿಗಳು ಬೇರೆಗೆ ಸ್ಥಳಾಂತರ ಆಗಬೇಕು. ಇಲ್ಲದಿದ್ದರೆ ಅವರು ಅಮೆರಿಕದಲ್ಲಿ ಉಳಿದುಕೊಳ್ಳುವ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಟ್ರಂಪ್ ಆಡಳಿತದ ಈ ನಿರ್ಧಾರವನ್ನು ವಿವಿಯ ದಕ್ಷಿಣ ಏಷ್ಯಾದ ವಿದ್ಯಾರ್ಥಿ ಸಂಘ ಬಲವಾಗಿ ಖಂಡಿಸಿದೆ. ಇದು ‘ಅನಗತ್ಯ ನಿರ್ಧಾರ’ ಮತ್ತು ವಿವಿ ಮೇಲಿನ ‘ಘೋರ ದಾಳಿ’ ಎಂದು ಕರೆದಿರುವ ಸಂಘ, ವಿವಿ ಆಡಳಿತ ತನ್ನ ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಮುದಾಯಕ್ಕೆ ದೃಢವಾದ ಬೆಂಬಲ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದೆ.

ವಿದೇಶಿ ವಿದ್ಯಾರ್ಥಿಗಳು ವಿವಿಗೆ ದಾಖಲಾಗುವುದನ್ನು ತಡೆಯುವುದಲ್ಲದೆ, ಪ್ರಸ್ತುತ ಇರುವ ವಿದ್ಯಾರ್ಥಿಗಳು ಬೇರೆಡೆಗೆ ವರ್ಗಾವಣೆಯಾಗುವಂತೆ ಒತ್ತಾಯಿಸುವ ಬಗ್ಗೆ ಸಂಘ ಕಳವಳ ವ್ಯಕ್ತಪಡಿಸಿದೆ. ಈ ಸಂದಿಗ್ಥ ಪರಿಸ್ಥಿತಿಯಲ್ಲಿ ನಮ್ಮ ದಕ್ಷಿಣ ಏಷ್ಯಾದ ಗೆಳೆಯರು ಮತ್ತು ಇಡೀ ವಿದೇಶಿ ವಿದ್ಯಾರ್ಥಿ ಸಮುದಾಯದೊಂದಿಗೆ ನಾವು ಇದ್ದೇವೆ ಎಂದು ಸಂಘ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದೆ.

ಎಲ್ಲಾ ವಿದೇಶಿ ವಿದ್ಯಾರ್ಥಿಗಳು ನಮ್ಮ ಸಂಘ ಮತ್ತು ಹಾರ್ವರ್ಡ್ ವಿವಿಯ ಅವಿಭಾಜ್ಯ ಅಂಗ ಎಂದು ಸಂಘ ತಿಳಿಸಿದೆ.

1986ರಲ್ಲಿ ಸ್ಥಾಪನೆಯಾದ ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ನೂರಾರು ಸದಸ್ಯರನ್ನು ಹೊಂದಿರುವ ಹಾರ್ವರ್ಡ್ ಕ್ಯಾಂಪಸ್‌ನಲ್ಲಿ ಅತಿದೊಡ್ಡ ಮತ್ತು ಅತ್ಯಂತ ಸಕ್ರಿಯ ವಿದ್ಯಾರ್ಥಿ ಗುಂಪುಗಳಲ್ಲಿ ಒಂದಾಗಿದೆ. ಇದು ಎಲ್ಲಾ ಹಿನ್ನೆಲೆಯ ದಕ್ಷಿಣ ಏಷ್ಯನ್ನರಿಗೆ, ಮುಖ್ಯವಾಗಿ ವಲಸಿಗರು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗಾಗಿ ಕೆಲಸ ಮಾಡುತ್ತದೆ.

ಪ್ರಸ್ತುತ, ಹಾರ್ವರ್ಡ್ ತನ್ನ ಸಂಸ್ಥೆಗಳಲ್ಲಿ ಪ್ರಪಂಚದ ವಿವಿಧ ಭಾಗಗಳ ಒಟ್ಟು 10,158 ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ನೆಲೆ ಕಲ್ಪಿಸಿದೆ.

ಹಾರ್ವರ್ಡ್ ಅಂತಾರಾಷ್ಟ್ರೀಯ ಕಚೇರಿಯ ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳ ಪ್ರಕಾರ, 2024-25ನೇ ಶೈಕ್ಷಣಿಕ ವರ್ಷದಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲಾ ಸಂಸ್ಥೆಗಳಲ್ಲಿ ಭಾರತದ 788 ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇದ್ದಾರೆ.

ಆಪರೇಷನ್ ಸಿಂಧೂರದ ಭಾಗವಾಗಿದ್ದ ಮಹಿಳಾ ವಿಂಗ್ ಕಮಾಂಡರನ್ನು ತೆಗೆದುಹಾಕದಂತೆ ಸುಪ್ರಿಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...