Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....