Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...