Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...