Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...