Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

’ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಹೆಮ್ಮೆಯಿದೆ’

- Advertisement -
- Advertisement -

ರೈತ ಹೋರಾಟಕ್ಕೆ ವಿಶ್ವದಾದ್ಯಂತ ಸಾವಿರಾರು ಸಂಘಟನೆಗಳು ಬೆಂಬಲ ನೀಡುತ್ತಿದೆ. ದಕ್ಷಿಣ ಭಾರತದ ರೈತರು ಈಗಾಗಲೇ ಸಾವಿರಾರು ಮಂದಿ ದೆಹಲಿಯ ಗಡಿಗಳಿಗೆ ತೆರಳಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ರೈತರ ಹೋರಾಟಗಳಲ್ಲಿ ಸಕ್ರಿಯವಾಗಿರುವ ದಕ್ಷಿಣ ಭಾರತದ 140ಕ್ಕೂ ಹೆಚ್ಚು ಸಾಮಾಜಿಕ ಹೋರಾಟಗಾರರು ಮತ್ತು ಮುಖಂಡರು ರೈತ ಹೋರಾಟಕ್ಕೆ ಬೆಂಬಲ ನೀಡಲು ತೆರಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿಯೂ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣದ ಸಾಮಾಜಿಕ ಹೋರಾಟಗಾರರು ಮತ್ತು ಅವರ ತಂಡ ಐಕ್ಯತೆ ಮತ್ತು ಒಗ್ಗಟ್ಟಿನ ಬೆಂಬಲ ನೀಡಲು ಫೆಬ್ರವರಿ 23 ರಂದು ದೆಹಲಿ ಪ್ರತಿಭಟನಾ ಸ್ಥಳಗಳಿಗೆ ತೆರಳುತ್ತಿದೆ.

ಈ ಹೋರಾಟಗಾರರು ಮತ್ತು ತಂಡದಲ್ಲಿ ಕರ್ನಾಟಕದ 64 ಸದಸ್ಯರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 28 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ದೆಹಲಿಗೆ ಹೋರಟಿದ್ದಾರೆ. ಫೆಬ್ರವರಿ 23 ರ ನಂತರ ಇನ್ನೂ ಅನೇಕ ಮಂದಿ ಈ ತಂಡವನ್ನು ಸೇರಲಿದ್ದಾರೆ. ಇದರಲ್ಲಿ ಕರ್ನಾಟಕದ ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಕರ್ನಾಟಕ ಜನಶಕ್ತಿ ಕಾರ್ಯಕರ್ತರು ಇಂದು ಬೆಂಗಳೂರಿನಿಂದ ಹೊರಟಿದ್ದು, ಫೆ.23 ರಂದು ದೆಹಲಿ ಸೇರಲಿದ್ದಾರೆ.

ಫೆಬ್ರವರಿ 23 ರಂದು ನಡೆಯಲಿರುವ ಪಗಡಿ ಸಂಭಾಲ್ ದಿನದಂದು ಈ ಹೋರಟಗಾರರ ತಂಡ ಸಿಂಘು ಗಡಿಯನ್ನು ತಲುಪಲಿದೆ. ಫೆಬ್ರವರಿ 24 ರಂದು ಟಿಕ್ರಿ ಬಾರ್ಡರ್, ಫೆಬ್ರವರಿ 25 ರಂದು ಶಹಜಹಾನಪುರ ಗಡಿ ಭಾಗ, ಫೆಬ್ರವರಿ 26 ರಂದು ಗಾಝಿಪುರ್‌ ಗಡಿಗೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಐತಿಹಾಸಿಕ ರೈತ ಹೋರಾಟದ 100 ನೇ ದಿನ ಈ ತಂಡ ಸಿಂಘು ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗಿ ಅಲ್ಲಿಂದ ತಮ್ಮ ಸ್ಥಳಗಳಿಗೆ ವಾಪಸ್ ಬರುತ್ತದೆ. ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಮತ್ತು 100 ನೇ ದಿನದ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಲು ಸಂತೋಷವಾಗುತ್ತಿದೆ ಎಂದು ಈ ಹೋರಾಟಗಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಈ ಸಾಮಾಜಿಕ ಕಾರ್ಯಕರ್ತರ ಅಭಿಯಾನವು ಪ್ರಯಾಣದಿಂದಲೇ ಆರಂಭವಾಗುತ್ತದೆ ಎಂದು ಹೇಳಲಾಗಿದೆ. ಹಗಲಿನ ವೇಳೆಯಲ್ಲಿ ದೀರ್ಘಾವಧಿಯ ನಿಲುಗಡೆ ಇರುವ ಕಡೆಯಲೆಲ್ಲಾ ಘೋಷಣೆಗಳು ಮತ್ತು ಹಾಡುಗಳೊಂದಿಗೆ ಪ್ರತಿರೋಧವನ್ನು ಪ್ರಾರಂಭಿಸಲಿದ್ದಾರೆ.

ರೈತ ನಾಯಕರೊಂದಿಗೆ ಸಾಧ್ಯವಾದಷ್ಟು ಸಂಕ್ಷಿಪ್ತ ಸಂವಹನ ನಡೆಸುತ್ತೇವೆ. ವೇದಿಕೆಗಳಲ್ಲಿ ಸಣ್ಣ ಭಾಷಣಗಳನ್ನು ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಹೋರಾಟದ ಹಾಡುಗಳನ್ನು ಮುಖ್ಯ ವೇದಿಕೆಯ ಹೊರತಾಗಿ ಬೇರೆ ಬೇರೆ ಸ್ಥಳಗಳಲ್ಲಿ ಪ್ರಸ್ತುತ ಪಡಿಸಲು ಈ ತಂಡ ಸಿದ್ಧತೆ ಮಾಡಿಕೊಂಡಿದೆ.

ಒಟ್ಟಾರೆ, ದೇಶದ ರೈತರು ಈ ವಿವಾದಿತ ಕೃಷಿ ಕಾನೂನಿನ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಒಗ್ಗಟ್ಟು ಮತ್ತು ಬೆಂಬಲ ನೀಡುವುದು ಇವರ ಉದ್ದೇಶವಾಗಿದೆ.

https://youtu.be/XVLbUUgKylw


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...