Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

’ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಹೆಮ್ಮೆಯಿದೆ’

- Advertisement -
- Advertisement -

ರೈತ ಹೋರಾಟಕ್ಕೆ ವಿಶ್ವದಾದ್ಯಂತ ಸಾವಿರಾರು ಸಂಘಟನೆಗಳು ಬೆಂಬಲ ನೀಡುತ್ತಿದೆ. ದಕ್ಷಿಣ ಭಾರತದ ರೈತರು ಈಗಾಗಲೇ ಸಾವಿರಾರು ಮಂದಿ ದೆಹಲಿಯ ಗಡಿಗಳಿಗೆ ತೆರಳಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ರೈತರ ಹೋರಾಟಗಳಲ್ಲಿ ಸಕ್ರಿಯವಾಗಿರುವ ದಕ್ಷಿಣ ಭಾರತದ 140ಕ್ಕೂ ಹೆಚ್ಚು ಸಾಮಾಜಿಕ ಹೋರಾಟಗಾರರು ಮತ್ತು ಮುಖಂಡರು ರೈತ ಹೋರಾಟಕ್ಕೆ ಬೆಂಬಲ ನೀಡಲು ತೆರಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿಯೂ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣದ ಸಾಮಾಜಿಕ ಹೋರಾಟಗಾರರು ಮತ್ತು ಅವರ ತಂಡ ಐಕ್ಯತೆ ಮತ್ತು ಒಗ್ಗಟ್ಟಿನ ಬೆಂಬಲ ನೀಡಲು ಫೆಬ್ರವರಿ 23 ರಂದು ದೆಹಲಿ ಪ್ರತಿಭಟನಾ ಸ್ಥಳಗಳಿಗೆ ತೆರಳುತ್ತಿದೆ.

ಈ ಹೋರಾಟಗಾರರು ಮತ್ತು ತಂಡದಲ್ಲಿ ಕರ್ನಾಟಕದ 64 ಸದಸ್ಯರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 28 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ದೆಹಲಿಗೆ ಹೋರಟಿದ್ದಾರೆ. ಫೆಬ್ರವರಿ 23 ರ ನಂತರ ಇನ್ನೂ ಅನೇಕ ಮಂದಿ ಈ ತಂಡವನ್ನು ಸೇರಲಿದ್ದಾರೆ. ಇದರಲ್ಲಿ ಕರ್ನಾಟಕದ ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಕರ್ನಾಟಕ ಜನಶಕ್ತಿ ಕಾರ್ಯಕರ್ತರು ಇಂದು ಬೆಂಗಳೂರಿನಿಂದ ಹೊರಟಿದ್ದು, ಫೆ.23 ರಂದು ದೆಹಲಿ ಸೇರಲಿದ್ದಾರೆ.

ಫೆಬ್ರವರಿ 23 ರಂದು ನಡೆಯಲಿರುವ ಪಗಡಿ ಸಂಭಾಲ್ ದಿನದಂದು ಈ ಹೋರಟಗಾರರ ತಂಡ ಸಿಂಘು ಗಡಿಯನ್ನು ತಲುಪಲಿದೆ. ಫೆಬ್ರವರಿ 24 ರಂದು ಟಿಕ್ರಿ ಬಾರ್ಡರ್, ಫೆಬ್ರವರಿ 25 ರಂದು ಶಹಜಹಾನಪುರ ಗಡಿ ಭಾಗ, ಫೆಬ್ರವರಿ 26 ರಂದು ಗಾಝಿಪುರ್‌ ಗಡಿಗೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಐತಿಹಾಸಿಕ ರೈತ ಹೋರಾಟದ 100 ನೇ ದಿನ ಈ ತಂಡ ಸಿಂಘು ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗಿ ಅಲ್ಲಿಂದ ತಮ್ಮ ಸ್ಥಳಗಳಿಗೆ ವಾಪಸ್ ಬರುತ್ತದೆ. ಫೆ. 23 ರಂದು ನಡೆಯುತ್ತಿರುವ ಪಗಡಿ ಸಂಭಾಲ್ ದಿನಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಮತ್ತು 100 ನೇ ದಿನದ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಲು ಸಂತೋಷವಾಗುತ್ತಿದೆ ಎಂದು ಈ ಹೋರಾಟಗಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಈ ಸಾಮಾಜಿಕ ಕಾರ್ಯಕರ್ತರ ಅಭಿಯಾನವು ಪ್ರಯಾಣದಿಂದಲೇ ಆರಂಭವಾಗುತ್ತದೆ ಎಂದು ಹೇಳಲಾಗಿದೆ. ಹಗಲಿನ ವೇಳೆಯಲ್ಲಿ ದೀರ್ಘಾವಧಿಯ ನಿಲುಗಡೆ ಇರುವ ಕಡೆಯಲೆಲ್ಲಾ ಘೋಷಣೆಗಳು ಮತ್ತು ಹಾಡುಗಳೊಂದಿಗೆ ಪ್ರತಿರೋಧವನ್ನು ಪ್ರಾರಂಭಿಸಲಿದ್ದಾರೆ.

ರೈತ ನಾಯಕರೊಂದಿಗೆ ಸಾಧ್ಯವಾದಷ್ಟು ಸಂಕ್ಷಿಪ್ತ ಸಂವಹನ ನಡೆಸುತ್ತೇವೆ. ವೇದಿಕೆಗಳಲ್ಲಿ ಸಣ್ಣ ಭಾಷಣಗಳನ್ನು ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಹೋರಾಟದ ಹಾಡುಗಳನ್ನು ಮುಖ್ಯ ವೇದಿಕೆಯ ಹೊರತಾಗಿ ಬೇರೆ ಬೇರೆ ಸ್ಥಳಗಳಲ್ಲಿ ಪ್ರಸ್ತುತ ಪಡಿಸಲು ಈ ತಂಡ ಸಿದ್ಧತೆ ಮಾಡಿಕೊಂಡಿದೆ.

ಒಟ್ಟಾರೆ, ದೇಶದ ರೈತರು ಈ ವಿವಾದಿತ ಕೃಷಿ ಕಾನೂನಿನ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಒಗ್ಗಟ್ಟು ಮತ್ತು ಬೆಂಬಲ ನೀಡುವುದು ಇವರ ಉದ್ದೇಶವಾಗಿದೆ.

https://youtu.be/XVLbUUgKylw


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...