Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...