Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...