Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...