Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...