Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...