Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...