Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...