Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...

ಹೈದರಾಬಾದ್ : ಡಿಜಿಟಲೀಕರಣಗೊಂಡ ಶೇ. 21ರಷ್ಟು ಮತದಾರರಿಗೆ SIR ನೋಟಿಸ್

ಹೈದರಾಬಾದ್ ಜಿಲ್ಲಾ ಚುನಾವಣಾ ಪ್ರಾಧಿಕಾರವು (ಡಿಇಎ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) 2026ರ ಅಡಿಯಲ್ಲಿ ಸೋಮವಾರ (ಆ. 17) ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, 5.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ...

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...