Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...