Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...