Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...