Homeಮುಖಪುಟವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

- Advertisement -
- Advertisement -

ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌. ಹೋಟೆಲ್‌ಗೆ ಹೊದ ತಕ್ಷಣ ನೆನಪಾಗುವುದೆ ಮೊದಲು ಇಡ್ಲಿ-ಸಾಂಬಾರ್.

ಆರೋಗ್ಯಕರವಾದ ಈ ತಿಂಡಿ ಸಾಮಾನ್ಯವಾಗಿ ಮುಂಜಾನೆಯ ಉಪಹಾರಕ್ಕೆ ತಯಾರಿಸಲಾಗುವುದು. ವಿಶೇಷ ಪರಿಮಳ ಹಾಗೂ ಗುಣಮಟ್ಟವನ್ನು ಹೊಂದಿರುವ ಇಡ್ಲಿ ಉಪವಾಸ ಕೈಗೊಳ್ಳುವವರಿಗೆ ಅಥವಾ ದೇಹದ ತೂಕ ಇಳಿಸಲು ಅತ್ಯುತ್ತಮ ಆಯ್ಕೆ. ಉತ್ತರ ಭಾರತದವರು ಇಡ್ಲಿಯನ್ನು ಅಷ್ಟಾಗಿ ಇಷ್ಟಪಡದಿದ್ದರೂ,  ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುವ ಈ ತಿಂಡಿ ದಕ್ಷಿಣ ಭಾರತೀಯರಿಗೆ ಫೇವರೆಟ್ ತಿಂಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇಡ್ಲಿ ಇಂದು ನಿನ್ನೆಯ ತಿಂಡಿಯಲ್ಲ ಇದರ ಇತಿಹಾಸ ಇನ್ನೂ ರೋಚಕವಾಗಿದೆ. 7 ನೇ ಶತಮಾನದಲ್ಲಿ ಇಡ್ಲಿಯನ್ನು ಕಂಡುಹಿಡಿಯಲಾಯಿತು ಎನ್ನಲಾದರೂ, ಕ್ರಿ.ಶ 920 ರಲ್ಲಿ ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಎಂಬ ಕನ್ನಡದ ಮೊದಲ ಗದ್ಯ ಕೃತಿಯಲ್ಲಿ ಇಡ್ಲಿಯ ಬಗ್ಗೆ ಉಲ್ಲೇಖವಿದೆ.

ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ. ಕ್ರಿ.ಶ.1025 ರ ದಾಖಲೆಯಂತೆ ಉದ್ದಿನ ಬೇಳೆಯನ್ನು ಮಜ್ಜಿಗೆಯಲ್ಲಿ ನೆನೆಸಿ, ರುಬ್ಬಿ, ಮೆಣಸು, ಕೊತ್ತಂಬರಿ, ಇಂಗು ಮೊದಲಾದವನ್ನು ಸೇರಿಸಿ ಹಿಟ್ಟನ್ನು ಸಿದ್ಧ ಪಡಿಸುತ್ತಿದ್ದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ಇನ್ನೂ ಕನ್ನಡ ರಾಜ ಮತ್ತು ವಿದ್ವಾಂಸ ಮೂರನೇ ಸೋಮೇಶ್ವರ ಕ್ರಿ.ಶ. 1130 ರಲ್ಲಿ ತನ್ನ ಸಂಸ್ಕೃತ ಗ್ರಂಥವಾದ ಮಾನಸೋಲ್ಲಾಸದಲ್ಲಿ ಇಡ್ಲಿ ತಯಾರಿಸುವ ವಿಧಾನವನ್ನು ವರ್ಣಿಸಿದ್ದಾರೆ.

ಕ್ರಿ.ಶ. 1508 ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ರಾಜನಾಗಿದ್ದ ಮಂಗರಸನ ‘ಸೂಪಶಾಸ್ತ್ರ’ ಕೃತಿಯು ಅಡುಗೆ ಕುರಿತಾದ ಮಹತ್ವದ ಕೃತಿ. ಆಹಾರದ ಮಹತ್ವದ ಬಗ್ಗೆ ಈ ಪುಸ್ತಕದಲ್ಲಿ ಹಲವು ಅಪರೂಪದ ಮಾಹಿತಿಗಳಿವೆ. ಇದರಲ್ಲಿ ಇಡ್ಲಿ ಬಗ್ಗೆ ಪ್ರಸ್ತಾಪಿಸಲಾಗಿದೆ.

Oats Idli Recipe - NDTV Food

ಇದನ್ನೂ ಓದಿ: ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಕೆಲ ಆಹಾರ ತಜ್ಞರು ಹೇಳುವ ಹಾಗೆ ಇಡ್ಲಿ ಭಾರತಕ್ಕೆ ಬಂದದ್ದು ಇಂಡೋನೇಷ್ಯಾದಿಂದ. ಸುಮಾರು 800-1200 ಶತಮಾನದಲ್ಲಿ ಭಾರತಕ್ಕೆ ಬಂದಿದೆ ಎನ್ನುತ್ತಾರೆ. ಇಂಡೋನೇಶ್ಯಾದಲ್ಲಿ ಇದನ್ನು ಕೆಡ್ಲಿ ಎಂದು ಕರೆಯಲಾಗುತ್ತದೆ. ಕನ್ನಡ ಶಿವಕೋಟ್ಯಾಚಾರ್ಯನ ವಡ್ಡಾರಾಧನೆ ಕೃತಿಯಲ್ಲೂ ಇಡ್ಡಲಿಗೆ ಎಂಬ ತಿಂಡಿಯ ಉಲ್ಲೇಖ ಬರುತ್ತದೆ ಹಾಗಾಗಿ ಇದು ಇಂಡೋನೇಷ್ಯಾದಿಂದ ಬಂದದ್ದು ಎಂಬ ವಾದ ಮುಂದಿಡುತ್ತಾರೆ.

17ನೇ ಶತಮಾನದವರೆಗೂ ಈ ತಿಂಡಿಗೆ ಅಕ್ಕಿಯನ್ನು ಬಳಸಿದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈಗ ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುತ್ತದೆ.

ಇಡ್ಲಿಯನ್ನು ಕೇವಲ ಉಪಹಾರವನ್ನಾಗಿ ಅಷ್ಟೇ ಅಲ್ಲ, ದಿನದ ಎಲ್ಲಾ ಹೊತ್ತು ಸವಿಯಬಹುದು. ಅಕ್ಕಿ ಮತ್ತು ಉದ್ದನ್ನು ನೆನೆಸಿ ತಯಾರಿಸಲಾಗುವ ಇಡ್ಲಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಹಾಗೆ ಇನ್ನೊಂದು ವಿಷ್ಯ..ಇಡ್ಲಿಗೂ ಒಂದು ದಿನ ಇದೆ. ಪ್ರತಿ ವರ್ಷ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನ ಆಚರಣೆ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...