Homeಕರ್ನಾಟಕನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

ನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನನ್ನು ವಿರೋಧಿಸಿ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಕೇಂದ್ರಿತವಾಗಿ ನಡೆಯುತ್ತಿದ್ದ ರೈತ ಹೋರಾಟವನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಉದ್ದೇಶದಿಂದ ಹಳ್ಳಿ ಹಳ್ಳಿಗಳಲ್ಲೂ ರೈತ ಮಹಾಪಂಚಾಯತ್‌ ನಡೆಸಲು ರೈತ ಮುಖಂಡರು ಉದ್ದೇಶಿಸಿದ್ದರು. ಅದರಂತೆ ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳದಲ್ಲಿ ಹಲವಾರು ರೈತ ಮಹಾಚಂಚಾಯತ್‌ಗಳು ನಡೆಯುತ್ತಿದ್ದು, ಭಾರಿ ಸಂಖ್ಯೆಯ ಜನಬೆಂಬಲ ಪಡೆಯುತ್ತಿದೆ. ಹೀಗಾಗಿ, ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ರಾಜ್ಯದ ಶಿವಮೊಗ್ಗದಲ್ಲಿ ಶನಿವಾರ(ನಾಳೆ) ನಡೆಯಲಿದ್ದು, ಅದರ ಸಿದ್ದತೆ ಭರದಿಂದ ಸಾಗಿದೆ.

ಈ ಹಿನ್ನಲೆಯಲ್ಲಿ ಶಿವಮೊಗ್ಗದ ರೈತ ಮಹಾಪಂಚಾತ್‌ನ ಸಂಚಾಲಕರಾದ ಎಂ. ಶ್ರೀಕಾಂತ್‌ ಮಾತನಾಡಿದ್ದು, “ನಾಳೆ ನಡೆಯಲಿರುವ ರೈತ ಮಹಾಪಂಚಾಯತ್‌ ದೇಶಕ್ಕೆ ಮಾದರಿಯಾದ ಹೋರಾಟವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರ ವಿಶ್ವಾಸದ ಮಾತನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ಈ ಬಗ್ಗೆ ಹಲವಾರು ರಾಜಕೀಯ ಪಕ್ಷಗಳು ಬೆಂಬಲ ನೀಡಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷಗಳ ನಾಯಕ ಯೋಗೇಶ್ ಮಾತನಾಡಿ, ‘ರೈತ ಆಂದೊಲನವು ಯಶಸ್ವಿಯಾಗಲಿದ್ದು, ಇಲ್ಲಿನ ಹಿರಿಯ ರೈತರು ರಾಕೇಶ್ ಟಿಕಾಯತ್‌ ಅವರ ತಂದೆ ಶಿವಮೊಗ್ಗಕ್ಕೆ ಬಂದು ಹೋರಾಟ ಮಾಡಿರುವುದನ್ನು ನೆನಪಿದ್ದಾರೆ. ರಾಕೇಶ್ ಟಿಕಾಯತ್‌ ಶಿವಮೊಗ್ಗಕ್ಕೆ ಬಂದು ನಮ್ಮ ಪರವಾಗಿ ಹೋರಾಟ ಮಾಡುವುದಾದರೆ ನಮ್ಮ ಒಂದು ದಿನವನ್ನು ಕೊಡುವುದು ನಮ್ಮ ಕರ್ತವ್ಯ ಎಂದು ರೈತರು ಹೇಳುತ್ತಿದ್ದಾರೆ’ ಎಂದು ಅವರು ಹೋರಾಟಕ್ಕೆ ಜನ ನೀಡುತ್ತಿರುವ ಸ್ಪಂದನೆಯ ಕುರಿತು ಮಾತನಾಡಿದ್ದಾರೆ. ಈ ವಿಡಿಯೋವನ್ನು ಕೆಳಗೆ ನೋಡ  ವೀಕ್ಷಿಸಬಹುದಾಗಿದೆ.

ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ಮಹಾ ಪಂಚಾಯತ್‌ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಡಾ. ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ರೈತ ಮುಖಂಡರು ಭಾಗವಹಿಸಲಿದ್ದಾರೆ.

ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ನಡೆಯಲಿದ್ದು, ಇದರ ನಂತರ ಮಾರ್ಚ್ 21 ರಂದು ಹಾವೇರಿ ಮತ್ತು ಮಾರ್ಚ್ 22 ರಂದು ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್ ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...