Homeಮುಖಪುಟದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

ದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

- Advertisement -
- Advertisement -

ತುರ್ತು ಮಿಲಿಟರಿ ಆಡಳಿತ ಹೇರಿ, ಬಳಿಕ ಅದನ್ನು ವಾಪಸ್ ಪಡೆದು ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನ ಪ್ರಯತ್ನ ವಿಫಲವಾಗಿದೆ.

ಭ್ರಷ್ಟಾಚಾರ ತನಿಖಾ ಕಚೇರಿಯ (ಸಿಐಒ) ಉನ್ನತ ಅಧಿಕಾರಿಗಳು ಇಂದು (ಜ.3) ಯೂನ್ ಸುಕ್ ಯೋಲ್ ಅವರ ಬಂಧನಕ್ಕೆ ಅಧ್ಯಕ್ಷರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಅಲ್ಲಿ ಯೂನ್ ಬೆಂಬಲಿಗರು ಮತ್ತು ಅವರ ಭದ್ರತಾ ಸಿಬ್ಬಂದಿಯಿಂದ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು ಬಂಧನಕ್ಕೊಳಗಾಗುವ ಮಾಹಿತಿ ದೊರೆತ ಹಿನ್ನೆಲೆ, ದೇಶದಾದ್ಯಂತ ಪ್ರತಿಭಟಿಸಲು ಯೂನ್ ಸುಕ್ ಯೋಲ್ ತನ್ನ ಬೆಂಬಲಿಗರಿಗೆ ನಿನ್ನೆಯೇ ಸೂಚನೆ ಕೊಟ್ಟಿದ್ದರು. ಯೂನ್ ಬೆಂಬಲಿಗರು ಇಂದು ಮುಂಜಾನೆಯೇ ಅವರ ನಿವಾಸದ ಬಳಿ ಜಮಾಯಿಸಲು ಶುರುಮಾಡಿದ್ದರು.

ಸೂರ್ಯೋದವಾಗುವ ಹೊತ್ತಿಗೆ ಅಧ್ಯಕ್ಷರ ಮನೆ ಬಳಿ ಜಮಾಯಿಸಿದ ಬೆಂಬಲಿಗರ ಸಂಖ್ಯೆ ಹೆಚ್ಚಾಗಿತ್ತು. ಯೂನ್ ಅವರ ಬಂಧನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬೆಂಬಲಿಗರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು.

ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಯೂನ್ ಬಂಧನಕ್ಕೆ ಭ್ರಷ್ಟಾಚಾರ ತನಿಖಾ ಕಚೇರಿಯ(ಸಿಐಒ) ಉನ್ನತ ಅಧಿಕಾರಿಗಳು ಅಧ್ಯಕ್ಷರ ಮನೆ ಬಳಿಗೆ ಪೊಲೀಸರೊಂದಿಗೆ ಬಂದಿದ್ದರು. ಆದರೆ, ಅಲ್ಲಿ ಯೂನ್ ಅವರನ್ನು ಅವರ ಭದ್ರತಾ ಪಡೆ (Presidential Security Service-PSS) ಮತ್ತು ಸೇನಾ ಸಿಬ್ಬಂದಿ ಭದ್ರಕೋಟೆ ರಚಿಸಿ ರಕ್ಷಿಸಿದ್ದಾರೆ. ಇದರಿಂದ ಯೂನ್ ಬಂಧನ ಸಾಧ್ಯವಿಲ್ಲ ಎಂಬುವುದು ಸಿಐಒ ಅಧಿಕಾರಿಗಳಿಗೆ ಮನವರಿಕೆಯಾಗಿತ್ತು.

ಯೂನ್ ಅವರ ಬಂಧನ ಸಾಧ್ಯವಿಲ್ಲ ಎಂದರಿತ ಬಳಿಕ ಸಿಐಒ ಅಧಿಕಾರಿಗಳು ಬಂಧನ ಪ್ರಯತ್ನವನ್ನು ರದ್ದುಗೊಳಿಸಿದರು. ತಮ್ಮನ್ನು ತಡೆದ ಅಧ್ಯಕ್ಷರ ಭದ್ರತಾ ತಂಡ ಮತ್ತು ತನಿಖೆಗೆ ಸಹಕಾರ ನೀಡದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ವಿರುದ್ದ ಸಿಐಒ ಅಧಿಕಾರಿಗಳು ಕಿಡಿಕಾರಿದ್ದಾರೆ.

ಯೂನ್ ಸುಕ್ ಯೋಲ್ ಅವರ ಕಾನೂನು ತಂಡ ಬಂಧನ ವಾರೆಂಟ್ ಕಾನೂನು ಬಾಹಿರ ಎಂದಿದ್ದು, ತನಿಖಾಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಲಯದ ಬಂಧನ ವಾರೆಂಟ್ ಜನವರಿ 6ರವರೆಗೆ ಮಾನ್ಯವಾಗಿರಲಿದೆ. ಅಷ್ಟರೊಳಗೆ ಯೋಲ್ ಅವರನ್ನು ಬಂಧಿಸಬೇಕಿದೆ. ಒಂದು ವೇಳೆ ಬಂಧಿಸಿದರೆ ಕೇವಲ 48 ಗಂಟೆಗಳ ಅವಧಿ ಮಾತ್ರ ಅದು ಮಾನ್ಯವಾಗಿರಲಿದೆ.

ಬಂಧನ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಸಿಐಒ ಅಧಿಕಾರಿಗಳು ಮುಂದಿನ ಕ್ರಮದ ಬಗೆ ಯೋಚಿಸುತ್ತೇವೆ ಎಂದಿದ್ದಾರೆ. ಯೂನ್ ವಿರುದ್ದ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ : ಬಿಡೆನ್ ಪತ್ನಿಗೆ ₹17 ಲಕ್ಷ ಮೌಲ್ಯದ ವಜ್ರದ ಉಡುಗೊರೆ ನೀಡಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...