Homeಮುಖಪುಟದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

ದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

- Advertisement -
- Advertisement -

ತುರ್ತು ಮಿಲಿಟರಿ ಆಡಳಿತ ಹೇರಿ, ಬಳಿಕ ಅದನ್ನು ವಾಪಸ್ ಪಡೆದು ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನ ಪ್ರಯತ್ನ ವಿಫಲವಾಗಿದೆ.

ಭ್ರಷ್ಟಾಚಾರ ತನಿಖಾ ಕಚೇರಿಯ (ಸಿಐಒ) ಉನ್ನತ ಅಧಿಕಾರಿಗಳು ಇಂದು (ಜ.3) ಯೂನ್ ಸುಕ್ ಯೋಲ್ ಅವರ ಬಂಧನಕ್ಕೆ ಅಧ್ಯಕ್ಷರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಅಲ್ಲಿ ಯೂನ್ ಬೆಂಬಲಿಗರು ಮತ್ತು ಅವರ ಭದ್ರತಾ ಸಿಬ್ಬಂದಿಯಿಂದ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು ಬಂಧನಕ್ಕೊಳಗಾಗುವ ಮಾಹಿತಿ ದೊರೆತ ಹಿನ್ನೆಲೆ, ದೇಶದಾದ್ಯಂತ ಪ್ರತಿಭಟಿಸಲು ಯೂನ್ ಸುಕ್ ಯೋಲ್ ತನ್ನ ಬೆಂಬಲಿಗರಿಗೆ ನಿನ್ನೆಯೇ ಸೂಚನೆ ಕೊಟ್ಟಿದ್ದರು. ಯೂನ್ ಬೆಂಬಲಿಗರು ಇಂದು ಮುಂಜಾನೆಯೇ ಅವರ ನಿವಾಸದ ಬಳಿ ಜಮಾಯಿಸಲು ಶುರುಮಾಡಿದ್ದರು.

ಸೂರ್ಯೋದವಾಗುವ ಹೊತ್ತಿಗೆ ಅಧ್ಯಕ್ಷರ ಮನೆ ಬಳಿ ಜಮಾಯಿಸಿದ ಬೆಂಬಲಿಗರ ಸಂಖ್ಯೆ ಹೆಚ್ಚಾಗಿತ್ತು. ಯೂನ್ ಅವರ ಬಂಧನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬೆಂಬಲಿಗರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು.

ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಯೂನ್ ಬಂಧನಕ್ಕೆ ಭ್ರಷ್ಟಾಚಾರ ತನಿಖಾ ಕಚೇರಿಯ(ಸಿಐಒ) ಉನ್ನತ ಅಧಿಕಾರಿಗಳು ಅಧ್ಯಕ್ಷರ ಮನೆ ಬಳಿಗೆ ಪೊಲೀಸರೊಂದಿಗೆ ಬಂದಿದ್ದರು. ಆದರೆ, ಅಲ್ಲಿ ಯೂನ್ ಅವರನ್ನು ಅವರ ಭದ್ರತಾ ಪಡೆ (Presidential Security Service-PSS) ಮತ್ತು ಸೇನಾ ಸಿಬ್ಬಂದಿ ಭದ್ರಕೋಟೆ ರಚಿಸಿ ರಕ್ಷಿಸಿದ್ದಾರೆ. ಇದರಿಂದ ಯೂನ್ ಬಂಧನ ಸಾಧ್ಯವಿಲ್ಲ ಎಂಬುವುದು ಸಿಐಒ ಅಧಿಕಾರಿಗಳಿಗೆ ಮನವರಿಕೆಯಾಗಿತ್ತು.

ಯೂನ್ ಅವರ ಬಂಧನ ಸಾಧ್ಯವಿಲ್ಲ ಎಂದರಿತ ಬಳಿಕ ಸಿಐಒ ಅಧಿಕಾರಿಗಳು ಬಂಧನ ಪ್ರಯತ್ನವನ್ನು ರದ್ದುಗೊಳಿಸಿದರು. ತಮ್ಮನ್ನು ತಡೆದ ಅಧ್ಯಕ್ಷರ ಭದ್ರತಾ ತಂಡ ಮತ್ತು ತನಿಖೆಗೆ ಸಹಕಾರ ನೀಡದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ವಿರುದ್ದ ಸಿಐಒ ಅಧಿಕಾರಿಗಳು ಕಿಡಿಕಾರಿದ್ದಾರೆ.

ಯೂನ್ ಸುಕ್ ಯೋಲ್ ಅವರ ಕಾನೂನು ತಂಡ ಬಂಧನ ವಾರೆಂಟ್ ಕಾನೂನು ಬಾಹಿರ ಎಂದಿದ್ದು, ತನಿಖಾಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಲಯದ ಬಂಧನ ವಾರೆಂಟ್ ಜನವರಿ 6ರವರೆಗೆ ಮಾನ್ಯವಾಗಿರಲಿದೆ. ಅಷ್ಟರೊಳಗೆ ಯೋಲ್ ಅವರನ್ನು ಬಂಧಿಸಬೇಕಿದೆ. ಒಂದು ವೇಳೆ ಬಂಧಿಸಿದರೆ ಕೇವಲ 48 ಗಂಟೆಗಳ ಅವಧಿ ಮಾತ್ರ ಅದು ಮಾನ್ಯವಾಗಿರಲಿದೆ.

ಬಂಧನ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಸಿಐಒ ಅಧಿಕಾರಿಗಳು ಮುಂದಿನ ಕ್ರಮದ ಬಗೆ ಯೋಚಿಸುತ್ತೇವೆ ಎಂದಿದ್ದಾರೆ. ಯೂನ್ ವಿರುದ್ದ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ : ಬಿಡೆನ್ ಪತ್ನಿಗೆ ₹17 ಲಕ್ಷ ಮೌಲ್ಯದ ವಜ್ರದ ಉಡುಗೊರೆ ನೀಡಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...