Homeಮುಖಪುಟದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

ದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

- Advertisement -
- Advertisement -

ತುರ್ತು ಮಿಲಿಟರಿ ಆಡಳಿತ ಹೇರಿ, ಬಳಿಕ ಅದನ್ನು ವಾಪಸ್ ಪಡೆದು ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನ ಪ್ರಯತ್ನ ವಿಫಲವಾಗಿದೆ.

ಭ್ರಷ್ಟಾಚಾರ ತನಿಖಾ ಕಚೇರಿಯ (ಸಿಐಒ) ಉನ್ನತ ಅಧಿಕಾರಿಗಳು ಇಂದು (ಜ.3) ಯೂನ್ ಸುಕ್ ಯೋಲ್ ಅವರ ಬಂಧನಕ್ಕೆ ಅಧ್ಯಕ್ಷರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಅಲ್ಲಿ ಯೂನ್ ಬೆಂಬಲಿಗರು ಮತ್ತು ಅವರ ಭದ್ರತಾ ಸಿಬ್ಬಂದಿಯಿಂದ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು ಬಂಧನಕ್ಕೊಳಗಾಗುವ ಮಾಹಿತಿ ದೊರೆತ ಹಿನ್ನೆಲೆ, ದೇಶದಾದ್ಯಂತ ಪ್ರತಿಭಟಿಸಲು ಯೂನ್ ಸುಕ್ ಯೋಲ್ ತನ್ನ ಬೆಂಬಲಿಗರಿಗೆ ನಿನ್ನೆಯೇ ಸೂಚನೆ ಕೊಟ್ಟಿದ್ದರು. ಯೂನ್ ಬೆಂಬಲಿಗರು ಇಂದು ಮುಂಜಾನೆಯೇ ಅವರ ನಿವಾಸದ ಬಳಿ ಜಮಾಯಿಸಲು ಶುರುಮಾಡಿದ್ದರು.

ಸೂರ್ಯೋದವಾಗುವ ಹೊತ್ತಿಗೆ ಅಧ್ಯಕ್ಷರ ಮನೆ ಬಳಿ ಜಮಾಯಿಸಿದ ಬೆಂಬಲಿಗರ ಸಂಖ್ಯೆ ಹೆಚ್ಚಾಗಿತ್ತು. ಯೂನ್ ಅವರ ಬಂಧನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬೆಂಬಲಿಗರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು.

ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಯೂನ್ ಬಂಧನಕ್ಕೆ ಭ್ರಷ್ಟಾಚಾರ ತನಿಖಾ ಕಚೇರಿಯ(ಸಿಐಒ) ಉನ್ನತ ಅಧಿಕಾರಿಗಳು ಅಧ್ಯಕ್ಷರ ಮನೆ ಬಳಿಗೆ ಪೊಲೀಸರೊಂದಿಗೆ ಬಂದಿದ್ದರು. ಆದರೆ, ಅಲ್ಲಿ ಯೂನ್ ಅವರನ್ನು ಅವರ ಭದ್ರತಾ ಪಡೆ (Presidential Security Service-PSS) ಮತ್ತು ಸೇನಾ ಸಿಬ್ಬಂದಿ ಭದ್ರಕೋಟೆ ರಚಿಸಿ ರಕ್ಷಿಸಿದ್ದಾರೆ. ಇದರಿಂದ ಯೂನ್ ಬಂಧನ ಸಾಧ್ಯವಿಲ್ಲ ಎಂಬುವುದು ಸಿಐಒ ಅಧಿಕಾರಿಗಳಿಗೆ ಮನವರಿಕೆಯಾಗಿತ್ತು.

ಯೂನ್ ಅವರ ಬಂಧನ ಸಾಧ್ಯವಿಲ್ಲ ಎಂದರಿತ ಬಳಿಕ ಸಿಐಒ ಅಧಿಕಾರಿಗಳು ಬಂಧನ ಪ್ರಯತ್ನವನ್ನು ರದ್ದುಗೊಳಿಸಿದರು. ತಮ್ಮನ್ನು ತಡೆದ ಅಧ್ಯಕ್ಷರ ಭದ್ರತಾ ತಂಡ ಮತ್ತು ತನಿಖೆಗೆ ಸಹಕಾರ ನೀಡದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ವಿರುದ್ದ ಸಿಐಒ ಅಧಿಕಾರಿಗಳು ಕಿಡಿಕಾರಿದ್ದಾರೆ.

ಯೂನ್ ಸುಕ್ ಯೋಲ್ ಅವರ ಕಾನೂನು ತಂಡ ಬಂಧನ ವಾರೆಂಟ್ ಕಾನೂನು ಬಾಹಿರ ಎಂದಿದ್ದು, ತನಿಖಾಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಲಯದ ಬಂಧನ ವಾರೆಂಟ್ ಜನವರಿ 6ರವರೆಗೆ ಮಾನ್ಯವಾಗಿರಲಿದೆ. ಅಷ್ಟರೊಳಗೆ ಯೋಲ್ ಅವರನ್ನು ಬಂಧಿಸಬೇಕಿದೆ. ಒಂದು ವೇಳೆ ಬಂಧಿಸಿದರೆ ಕೇವಲ 48 ಗಂಟೆಗಳ ಅವಧಿ ಮಾತ್ರ ಅದು ಮಾನ್ಯವಾಗಿರಲಿದೆ.

ಬಂಧನ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಸಿಐಒ ಅಧಿಕಾರಿಗಳು ಮುಂದಿನ ಕ್ರಮದ ಬಗೆ ಯೋಚಿಸುತ್ತೇವೆ ಎಂದಿದ್ದಾರೆ. ಯೂನ್ ವಿರುದ್ದ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ : ಬಿಡೆನ್ ಪತ್ನಿಗೆ ₹17 ಲಕ್ಷ ಮೌಲ್ಯದ ವಜ್ರದ ಉಡುಗೊರೆ ನೀಡಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....