Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...