Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...