Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...